ಎಲೆಕ್ಟ್ರಿಕ್ ಬಸ್‍ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ; ಶ್ರೀರಾಮುಲು ಸ್ಪಷ್ಟನೆ

ಬೆಂಗಳೂರು,ಮಾ.18 : ನಗರದಲ್ಲಿ ಸಂಚರಿಸುವ ಎಲೆಕ್ಟ್ರಿಕ್ ಬಸ್‍ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಸದಸ್ಯರಾದ ಕೆ.ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುತ್ತಿಗೆ ಆಧಾರದ ಮೇಲೆ ನಿಯೋಜಿಸಲಾಗಿರುವ ಎಲೆಕ್ಟ್ರಿಕ್ ಬಸ್‍ಗಳು 90 ಕಿ.ಮೀನಷ್ಟು ಸಂಚರಿಸುತ್ತಿವೆ. 24 ಬಸ್‍ಗಳು ಸದ್ಯಕ್ಕೆ ಕಾರ್ಯಾಚರಣೆ ನಡೆಸುತ್ತಿವೆ. ಅವುಗಳಲ್ಲಿ ಕೆಲವು 190 ಕಿ.ಮೀವರೆಗೂ ಸಂಚಾರ ಮಾಡಿವೆ ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, 300 ಬಸ್‍ಗಳ ಕಾರ್ಯಾಚರಣೆಗೆ ಒಪ್ಪಂದ ಮಾಡಿಕೊಂಡು ಬಿಲ್ ಪಾವತಿಸಲಾಗುತ್ತಿದೆ. ಆದರೆ 24 ಬಸ್‍ಗಳು ಮಾತ್ರ ಸಂಚರಿಸುತ್ತಿವೆ. 190 ಕಿ.ಮೀ ಸಂಚರಿಸಬೇಕು ಎಂಬ ಕರಾರು ಇದೆ. ಕೇವಲ 90 ಕಿ.ಮೀ ನಷ್ಟು ಸಂಚರಿಸುತ್ತಿವೆ. ಇದರಲ್ಲಿ ಸಾಕಷ್ಟು ಅವ್ಯವಹಾರವಾಗಿದೆ ಎಂದು ಆರೋಪಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಸಾರಿಗೆ ನೌಕರರಿಗೆ ವೇತನ ಪಾವತಿಯಾಗುತ್ತಿಲ್ಲ. ಆದರೆ ಸರ್ಕಾರ ಅನಗತ್ಯವಾಗಿ ಈರೀತಿ ಹಣ ವೆಚ್ಚ ಮಾಡುತ್ತಿದೆ. ಹೆಚ್ಚುವರಿಯಾಗಿ 300 ಬಸ್‍ಗಳ ಖರೀದಿಗೂ ಮುಂದಾಗಿದೆ. ಇದು ಸರಿಯಲ್ಲ ಎಂದರು.

ಇದಕ್ಕೆ ಸ್ಪಷ್ಟನೆ ನೀಡಿದ ಸಚಿವರು , ಈ ಹಿಂದೆ 7-8ಗಳವರೆಗೂ ಸಾರಿಗೆ ನೌಕರರಿಗೆ ವೇತನ ಪಾವತಿಯಾಗುತ್ತಿರಲಿಲ್ಲ. ಈಗ ನಮ್ಮ ಸರ್ಕಾರ ಕೋವಿಡ್ ಸಂಕಷ್ಟದ ನಡುವೆಯೂ 3 ಸಾವಿರ ಕೋಟಿ ರೂ. ಆರ್ಥಿಕ ನೆರವಿನೊಂದಿಗೆ ವೇತನ ಪಾವತಿಸಿದೆ. ಎರಡು ತಿಂಗಳ ವೇತನ ಪಾವತಿ ಬಾಕಿ ಉಳಿದಿದೆ. ಅದನ್ನು ಕೂಡ ಪಾವತಿಸಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಬಾಕಿ ಪಾವತಿಸಲಾಗುವುದು ಎಂದರು.

ಶಾಸಕ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 6ನೇ ವೇತನ ಆಯೋಗ ಜಾರಿ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಸಾರಿಗೆ ನಿಗಮಗಳ ನೌಕರರ ಪೈಕಿ 2846 ಮಂದಿಯನ್ನು ಅಮಾನತುಗೊಳಿಸಲಾಗಿದೆ, 1500 ಮಂದಿಯನ್ನು ವಜಾಗೊಳಿಸಲಾಗಿದೆ. ಅದರಲ್ಲಿ ಕೆಎಸ್‍ಆರ್‍ಟಿಸಿ 281 ಮಂದಿಯ ಅಮಾನತನ್ನು ಹಿಂಪಡೆಯಲಾಗಿದೆ. ವಜಾಗೊಂಡ 74 ಮಂದಿ ಪೈಕಿ 5 ಮಂದಿಯನ್ನು ಪುನರ್ ನೇಮಕ ಮಾಡಲಾಗಿದೆ.

ಬಿಎಂಟಿಸಿಯಲ್ಲಿ ಎಲ್ಲರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 61 ಮಂದಿಯ ಅಮಾನತನ್ನು ಹಿಂಪಡೆಯಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 63 ಮಂದಿಯನ್ನು ಅಮಾನತನ್ನು ಹಿಂಪಡೆಯಲಾಗಿದೆ.

ವಜಾಗೊಂಡ 60 ಮಂದಿ ಪೈಕಿ 7 ಮಂದಿಯನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ವಜಾಗೊಂಡ ಎಲ್ಲ ನಿಗಮಗಳ ನೌಕರರು ಲೋಕ ಅದಾಲತ್ ಮೂಲಕವೇ ಮರು ನೇಮಕಗೊಳ್ಳಬೇಕೆಂದು ಸೂಚಿಸಲಾಗಿದೆ. ಆದರೆ ಸರ್ಕಾರ ಎಲ್ಲರನ್ನೂ ಮರು ನೇಮಕ ಮಾಡಿಕೊಳ್ಳುವ ಬದ್ದತೆ ಹೊಂದಿದೆ ಎಂದರು.

Gayathri SG

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1 hour ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

1 hour ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

2 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

2 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

3 hours ago