ಬೆಂಗಳೂರು : ಎಲ್ಲರ ಜೊತೆಗೂ ಚರ್ಚೆ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಜೊತೆಗೆ ಚರ್ಚಿಸಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ಇದು ಪಕ್ಷದ ರಾಷ್ಟ್ರೀಯ ನೀತಿಯಾಗಿದೆ. ಇದಕ್ಕೆ ಯಾವ ಸಚಿವರೂ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ವಿಚಾರದಲ್ಲಿ ಯಾವುದೇ ಸಚಿವರಿಗೆ ಅಸಮಾಧವಿಲ್ಲ. ರಾಷ್ಟ್ರೀಯ ನಾಯಕರ ನಿರ್ಧಾರ ಹಾಗೂ ಎಲ್ಲ ಸಚಿವರೊಂದಿಗೆ ಚರ್ಚೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.