ಬೆಂಗಳೂರು: ರಾಜ್ಯ ಸರ್ಕಾರದ ಎಲ್ ಇಡಿ ಭಾಗ್ಯ ಯೋಜನೆಗೆ ಸ್ಯಾಂಡಲ್ ವುಡ್ ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಯಭಾರಿಗಳ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ಕುಮಾರ್, ನಟಿ ರಮ್ಯಾ ಉಪಸ್ಥಿತರಿದ್ದರು. ಸಮಾರಂಭದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಡಿಕೆಶಿ, ರಮ್ಯಾ ಆಯ್ಕೆ ಮಾಜಿ ಸಂಸದೆ ಎನ್ನುವುದಕ್ಕಿಂತ ಹೆಚ್ಚಾಗಿ ಜನಪ್ರಿಯ ಚಿತ್ರನಟಿ ಎಂಬ ಕಾರಣಕ್ಕೆ ಮಾಡಲಾಗಿದೆ. ಈ ಹಿಂದೆಯೂ ಕೇಂದ್ರದ ಕೆಲ ಯೋಜನೆಗೆ ರಾಜ್ಯ ಸಭಾಸದಸ್ಯರಾದ ಹೇಮಾ ಮಾಲಿನಿ, ಅಮಿತಾಬ್ ಬಚ್ಚನ್, ಸಚಿನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇವರೆಲ್ಲರನ್ನೂ ಸಂಸದರೆನ್ನುವ ಬದಲು ಜನಪ್ರಿಯ ವ್ಯಕ್ತಿಗಳು ಎಂಬ ಕಾರಣಕ್ಕೆ ಆಯ್ಕೆ ಮಾಡಲಾಗಿತ್ತು. ಅದೇ ಕಾರ್ಯ ಇಲ್ಲಿಯೂ ಆಗಿದೆ ಎಂದರು.
ಎಲ್ಇಡಿ ಭಾಗ್ಯ ಯೋಜನೆಗೆ ರಾಯಭಾರಿ ಆಗಿದ್ದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.