ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ(ಡಿಪಿಐ)ಯ ಕಮಿಷನರ್ ಕೆಜಿ ಜಗದೀಶ್ ಎಚ್ಚರಿಸಿದರು.
ಎಲ್ಲಾ ಮುಂಜಾಗ್ರತೆ ಮತ್ತು ಸುರಕ್ಷತೆ ಕ್ರಮಗಳನ್ನು ತೆಗೆದುಕೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಸುಳ್ಳು ಸುದ್ದಿ ಬಗ್ಗೆ ಗಮನವಿಡುವಂತೆ ಡಿಡಿಪಿಐಗೆ ತಿಳಿಸಲಾಗಿದೆ. ಸುಳ್ಳು ಮೆಸೇಜ್, ಸುದ್ದಿ ಹಬ್ಬುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು.
ಯಾವುದೇ ಸಮಸ್ಯೆಯಿಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಎಸ್ ಎಸ್ ಎಲ್ಸಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಜತೆಗೆ ಉಪಾಯುಕ್ತರು ಸಭೆ ನಡೆಸುತ್ತಿದ್ದಾರೆ.