News Karnataka Kannada
Monday, April 29 2024
ಬೆಂಗಳೂರು ನಗರ

ಏಕರೂಪ ನಾಗರಿಕ ಸಂಹಿತೆಗೆ ದೇವೇಗೌಡ ವಿರೋಧ

Photo Credit :

ಏಕರೂಪ ನಾಗರಿಕ ಸಂಹಿತೆಗೆ ದೇವೇಗೌಡ ವಿರೋಧ

ಬೆಂಗಳೂರು: ಬಹುಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ತಾನು ಇದಕ್ಕೆ ಅವಕಾಶ ನೀಡುವುದಿಲ್ಲ. ಈಗಾಗಲೇ ನನ್ನ ನಿಲುವನ್ನು ನಾನು ಸ್ಪಷ್ಟಡಿಸಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ವರ್ಷದ ಬ್ಯಾರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಏಕ ನಾಗರಿಕ ಸಂಹಿತೆ ಭಾರತದಂತಹ ವೈವಿಧ್ಯಮಯ ಸಂಸ್ಕೃತಿ, ಧರ್ಮ ಇರುವ ದೇಶದಲ್ಲಿ ಜಾರಿಸಲು ಸಾಧ್ಯವಿಲ್ಲ. ಇಲ್ಲಿ ಎಲ್ಲರೂ ಅವರವರ ಧರ್ಮಗಳ ಅನುಸಾರ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಸಂಹಿತೆ ಜಾರಿ ಸರಿಯಲ್ಲ. ಇದನ್ನು ಹೇಳಲು ತಮಗೆ ಯಾವುದೇ ಸಂಕೋಚವಿಲ್ಲ ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಬ್ಯಾರಿ ಮುಸ್ಲಿಮ್ ಸಮಾಜವು ಪ್ರಾಮಾಣಿಕತೆ ಹಾಗೂ ನಿಷ್ಠೆಗೆ ಪ್ರಸಿದ್ಧಿಯಾಗಿದೆ. ಬ್ಯಾರಿ ಮುಸ್ಲಿಮರು ಶಿಕ್ಷಣ, ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಛಾಪನ್ನು ಮೂಡಿಸಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಸ್ವಾಗತಾರ್ಹ ಎಂದು ದೇವೇಗೌಡ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಗ್ರಾಮದಲ್ಲಿ ಫೌಝಿಯಾ ಹಾಗೂ ಸಮೀರಾ ಎಂಬ ಹೆಣ್ಣುಮಕ್ಕಳು ಪದವಿ ಕಾಲೇಜು ಪ್ರಾರಂಭ ಮಾಡಿರುವ ಸಾಧನೆಯು ಅಪ್ರತಿಮವಾದದ್ದು. ನನ್ನ ಸಂಸದರ ನಿಧಿಯಿಂದ ಈ ಹೆಣ್ಣುಮಕ್ಕಳು ಸ್ಥಾಪನೆ ಮಾಡಿರುವ ಕಾಲೇಜಿಗೆ ನೆರವು ನೀಡಲು ಸಾಧ್ಯವಿರುವ ಕುರಿತು ಪರಿಶೀಲಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾರಣಾಂತರಗಳಿಂದ ಅವರು ಪರಾಭವಗೊಂಡರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ, ಸೋಲಿನ ನಂತರವೂ ನಿಷ್ಠೆಯನ್ನು ಕಾಯ್ದುಕೊಂಡು ತಮ್ಮೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ಇದು ಉತ್ತಮವಾದ ಗುಣ ಎಂದು ಅವರು ಹೇಳಿದರು. ನಿಷ್ಠೆ ಹಾಗೂ ಪ್ರಾಮಾಣಿಕತೆ ಬ್ಯಾರಿ ಸಮಾಜದ ಪ್ರತಿಯೊಬ್ಬರಲ್ಲೂ ಇದೇ ಎನ್ನುವುದಕ್ಕೆ ಫಾರೂಕ್ ಉದಾಹರಣೆ. ಮುಂದಿನ ಚುನಾವಣೆಯವರೆಗೆ ನಾನು ಜೀವಂತವಾಗಿದ್ದರೆ ಈಗ ಸಚಿವ ಯು.ಟಿ.ಖಾದರ್ ಕೂತಿರುವ ಸ್ಥಾನದಲ್ಲಿ ಅವರನ್ನು ಕೂರಿಸುತ್ತೇನೆ ಎಂದು ದೇವೇಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವ, ಮಾಜಿ ಸಚಿವ ಬಿ.ಎ.ಮೊಯಿದೀನ್, ಜೆಡಿಎಸ್ ಮುಖಂಡ ಶಫೀವುಲ್ಲಾ, ಸಂಘದ ಅಧ್ಯಕ್ಷ ಬಿ.ಎಂ.ಫಾರೂಕ್, ಪತ್ರಕರ್ತ ಬಿ.ಎಂ. ಹನೀಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಗ್ರಾಮದಲ್ಲಿ ಪದವಿ ಕಾಲೇಜು ಪ್ರಾರಂಭಿಸಿರುವ ಫೌಝಿಯಾ ಹಾಗೂ ಸಮೀರಾರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರಧಾನ ಮಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು