News Karnataka Kannada
Tuesday, April 30 2024
ಬೆಂಗಳೂರು ನಗರ

ಐದನೇ ದಿನದ ಪಾದಯಾತ್ರೆಗೆ ರಾಮನಗರದಲ್ಲಿ ಸರ್ಪಗಾವಲು

Dk S
Photo Credit :

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಈ ಪಾದಯಾತ್ರೆಯನ್ನು ತಡೆಯುವಂತೆ ಹೈಕೋರ್ಟ್ ಸರ್ಕಾರಕ್ಕೆ ತಪರಾಕಿ ನೀಡಿದ್ದು, ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ತಡೆಯುವ ಪ್ರಯತ್ನ ಮಾಡಿದ್ದು ರಾಮನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದೆ.

ಡಿ.ಕೆ.ಶಿವಕುಮಾರ್ ಪಾದಯಾತ್ರೆಗೆ ಮುನ್ನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ರಾಮನಗರ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದು ಸದ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುವ ಕುರಿತಂತೆ ಚರ್ಚೆ ಮಾಡುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ದೂರವಾಣಿ ಕರೆಮಾಡಿ ಪಕ್ಷಕ್ಕೆ ಮುಜುಗರ ನೀಡುವ ರೀತಿಯಲ್ಲಿ ಪಾದಯಾತ್ರೆ ಮಾಡಬೇಡಿ ಎಂಬ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ನಾಯಕರಿಗೆ ಕೊರೊನಾ ಸೋಂಕು ತಗುಲಿದ್ದು, ಈಗಾಗಲೇ ವೀರಪ್ಪ ಮೊಯ್ಲಿ, ಮಲಾಜಮ್ಮ, ಹೆಚ್.ಎಂ.ರೇವಣ್ಣ, ಸಿ.ಎಂ.ಇಬ್ರಾಹಿಂ ಅವರಿಗೆ ಬಂದಿದ್ದು ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸೋಂಕು ತಗುಲಿರುವುದು ದೃಢವಾಗಿದೆ.

ನಾಯಕರು ಐದನೇ ದಿನದ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸುತ್ತಿದ್ದರೆ, ಹೊರಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಕಾರ್ಯಕರ್ತರು, ಕಲಾವಿದರು ಪಾದಯಾತ್ರೆ ಯಾವಾಗ ಆರಂಭವಾಗುತ್ತದೆ ಎಂದು ಕಾಯುತ್ತಿದೆ. ಮತ್ತೊಂದೆಡೆ ಪೊಲೀಸರು ಪಾದಯಾತ್ರೆ ತಡೆಯಲು ಸಜ್ಜಾಗಿದ್ದಾರೆ. ಐದನೇ ದಿನದ ಪಾದಯಾತ್ರೆಗೆ ಮಂಡ್ಯ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದಲೂ ಕಾರ್ಯಕರ್ತರು ಆಗಮಿಸಿದ್ದಾರೆ.

ಪೊಲೀಸರು ಪಾದಯಾತ್ರೆ ಮಾಡಿದರೆ ಅವರನ್ನು ಬಂಧಿಸುವ ಸಲುವಾಗಿ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೆಲ್ಲದರ ನಡುವೆ ಕಾಂಗ್ರೆಸ್ ನ ಕೆಲವು ನಾಯಕರು ಪಾದಯಾತ್ರೆಯನ್ನು ಮೊಟಕುಗೊಳಿಸುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಠಬಿಡದೆ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂಬ ಹಠಕ್ಕೆ ಬಿದ್ದಿರುವ ಡಿಕೆಶಿ ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು