News Karnataka Kannada
Monday, April 29 2024
ಬೆಂಗಳೂರು ನಗರ

ಐವರು ವಿದ್ಯಾರ್ಥಿಗಳಿಗೆ ಕೊರೊನಾ ಬಂದ್ರೆ ಶಾಲೆ ಬಂದ್!

School
Photo Credit : News Kannada

ಬೆಂಗಳೂರು :  ಬೆಂಗಳೂರಿನಲ್ಲಿ ಜನವರಿ 29 ರವರೆಗೆ 10 ನೇ ತರಗತಿಯಿಂದ ಪಿಯುಸಿ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳ ತರಗತಿಗಳನ್ನು ಬಂದ್ ಮಾಡಲು ಹಾಗೂ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ಬರುವಂತೆ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ ಬೆಂಗಳೂರು ಹೊರತುಪಡಿಸಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೂ ಸೋಂಕು ಪ್ರಕರಣ ವರದಿಯಾದ ಶಾಲೆಯನ್ನು ಮಾತ್ರ 3 ರಿಂದ 7 ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಬೇಕು ಬಳಿಕ ಪುನರ್ ಆರಂಭ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ನಿರ್ದಿಷ್ಟ ಶಾಲೆಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಶಾಲೆಯಲ್ಲಿ 5 ಕ್ಕಿಂತ ಕಡಿಮೆ ಸೋಂಕು ಪ್ರಕರಣ ವರದಿಯಾದರೆ 3 ದಿನ, 20-30 ಕ್ಕೂ ಹೆಚ್ಚು ಪ್ರಕರಣ ವರದಿಯಾದರೆ 7 ದಿನ ಮುಚ್ಚಲಾಗುವುದು. ಬಳಿಕ ಎಂದಿನಂತೆ ಶಾಲೆಯನ್ನು ತೆರೆದು ತರಗತಿಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು