News Karnataka Kannada
Monday, May 06 2024
ಬೆಂಗಳೂರು ನಗರ

ಒಂದೂವರೆ ಸಾವಿರ ರೂ. ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯ ಕೊಲೆ !

Murder Girl 16082021
Photo Credit :

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮೆಹಬೂಬ್(19) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ನಗರದ ಎ.ಕೆ. ಕಾಲನಿ ಹತ್ತಿರ ಮಣಿಕಂಠ ಹಾಗೂ ಲಲಿತ್ ಎಂಬುವವರ ಮಧ್ಯೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಮೆಹಬೂಬ್ ಕೂಡ ಅಲ್ಲಿದ್ದಾನೆ. ಇವರಿಬ್ಬರ ಜಗಳ ವಿಕೋಪಕ್ಕೆ ತೆರಳುತ್ತಿದ್ದಂತೆ ಮೆಹಬೂಬ್ ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಮಣಿಕಂಠ, ಕಾರ್ತಿಕ್, ಕಿರಣ ಸೇರಿದಂತೆ 13 ಜನ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು