News Karnataka Kannada
Tuesday, April 30 2024
ಬೆಂಗಳೂರು ನಗರ

ಒಕ್ಕಲಿಗರ ಸಂಘದ ಮತ ಮರು ಎಣಿಕೆಗೆ ಮನವಿ

Okkaliga
Photo Credit :

ಬೆಂಗಳೂರು: ಒಕ್ಕಲಿಗರ ಸಂಘದ ಚುನಾವಣೆಯ ಮತ  ಎಣಿಕೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಮರುಮತ ಎಣಿಕೆ ಮಾಡಬೇಕು ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಸತೀಶ್ ಕಡತನಮಲೆ, ಅರಮನೆ ಶಂಕರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಿಚಾರಣೆಗೆ ಅಂಗೀಕಾರ ಮಾಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ರಜಾಕಾಲದ ಏಕ ಸದಸ್ಯ  ನ್ಯಾಯಪೀಠವು, ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಹಾಗೂ ಸಂಘದ ಆಡಳಿತಾಧಿಕಾರಿ ಅವರಿಗೆ ನೊಟೀಸ್ ಜಾರಿ ಮಾಡಿದೆ.

ಈ ಬಗ್ಗೆ ರಜಾ ಕಾಲ ಮುಗಿದ ನಂತರ ಪುನಾ ನ್ಯಾಯಾಲಯದಿಂದ ಆದೇಶ ಪಡೆದುಕೊಳ್ಳುವಂತೆ ಅರ್ಜಿದಾರರಿಗೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು.

ಸಂಘದ ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿದೆ. 389 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆದರೂ ಒಬ್ಬ ಅಭ್ಯರ್ಥಿಗೆ ಕೇವಲ 25 ಪ್ರವೇಶ  ಪಾಸ್ ನೀಡಲಾಗಿತ್ತು.  25 ಪಾಸ್ ಗಳನ್ನು ಇಟ್ಟುಕೊಂಡು 389 ಕೇಂದ್ರಗಳಲ್ಲಿ ಮತ ಎಣಿಕೆ ವೀಕ್ಷಿಸಲು ಸಾಧ್ಯವೇ?  ಈ ವಿಷಯವನ್ನು ಆ ಸಂದರ್ಭದಲ್ಲೇ ಚುನಾವಣಾ ಅಧಿಕಾರಿಗೆ ಲಿಖಿತ ದೂರು ನೀಡಿದ್ದರೂ ಅವರು ಪರಿಗಣನೆ ಮಾಡಲಿಲ್ಲ. ಈ ಕಾರಣಕ್ಕೆ ನಾವು ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ಸತೀಶ್ ಕಡತನಮಲೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12352
C Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು