ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಬೆನ್ನಲ್ಲೇ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಂಬಂಧಪಟ್ಟ ವ್ಯಕ್ತಿಗಳನ್ನ ಪ್ರೈಮರಿ ಮತ್ತು ಸೆಕೆಂಡರಿ ಐಸೋಲೇಟ್ ಮಾಡಲಾಗಿದೆ.
ಈ ವೈರಸ್, ಸಮಸ್ಯೆ ಹೇಗೆ ಬರಲಿದೆ ಅಂತ ಅಧ್ಯಯನ ಮಾಡಲಾಗಿದೆ. ಜೀವಕ್ಕೆ ಅಪಾಯವಿಲ್ಲ.ಜಿನೋಮ್ ಸೀಕ್ವೆನ್ಸ್ ಕಳಿಸಲಾಗಿತ್ತು.ಬೇರೆ ಬೇರೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು, ಕೇವಲ ದೈಹಿಕವಾಗಿ ಸೋರ್ನೆಸ್, ಮಾಂಸ ಕಂಡ ನೋವು ಕಾಣಿಸಿಕೊಳ್ಳಲಿದೆ ಎಂದರು.
11ದೇಶಗಳ ಸ್ಥಿತಿಗತಿ ನೋಡಿಕೊಂಡು ಕ್ರಮ ತೆಗೆದುಕೊಂಡಿದ್ದೇವೆ, ವೇಗವಾಗಿ ಹರಡುತ್ತದೆ, ಆದರೆ ಜೀವಕ್ಕೆ ಅಪಾಯ ಇಲ್ಲ. ಹರಡುವ ಪ್ರಮಾಣ ವೇಗವಾಗಿದೆ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ ಎಂದರು.
ಕಡ್ಡಾಯವಾಗಿ ತಪಾಸಣೆ ಆಗಿದ್ದರೂ,, ರಿಪೋರ್ಟ್ ಬರೋವರೆಗೂ ಅವರನ್ನ ಕಳಿಸುವುದಿಲ್ಲ.ನೆಗೆಟೀವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರ ದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟೀವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟುಕೊಳ್ಳಲಾಗುವುದು ಎಂದರು.
ವಿಧಾನಸೌಧ ಸೆಕ್ರೆಟರಿಯೇಟ್ ಇಂದಲೂ ಬೆಳಗಾವಿ ಅಧಿವೇಶನ ಬೇಡ ಅಂತ ಹೇಳಿದ್ದಾರೆ. ಸಿಎಂ ಕೂಡ ಗಮನ ಹರಿಸೋಣ ಅಂತ ಹೇಳಿದ್ದಾರೆ. ಸವಾಲು ಮತ್ತು ಬೇಡಿಕೆ ಎರಡೂ ಇದೆ. ಸಿಎಂ ಬಂದ ಬಳಿಕ ಸಭಾಪತಿ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.