News Karnataka Kannada
Friday, May 03 2024
ಬೆಂಗಳೂರು ನಗರ

ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಚಿವ ಡಾ. ಸುಧಾಕರ್

Sudhakar Minister
Photo Credit :

ಬೆಂಗಳೂರು: ಒಮಿಕ್ರಾನ್ ಹೊಸತಳಿ ಬಗ್ಗೆ ನಾವು ಅನೇಕರ ಬಳಿ ಸಂಪರ್ಕದಲ್ಲಿ ಇದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಹೇಳಿಕೆ ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಕಡ್ಡಾಯ ರದ್ದು ಮಾಡಲಾಗಿದೆ.ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ.

ನಮ್ಮಲ್ಲಿ ಶೇ. 90 ರಷ್ಟು ಜನ ಮಾಸ್ಕ್ ಹಾಕುತ್ತಿಲ್ಲ. ನಾವೂ ಕೂಡ ಅವರುಗಳ ಮೇಲೆ ಕೇಸ್ ಹಾಕುತ್ತಾ ಇಲ್ಲ. ಮಾಸ್ಕ್ ರದ್ದು ಮಾಡಿರುವ ಬಗ್ಗೆ ನಾವೇನೂ ಆದೇಶ ಮಾಡಿಲ್ಲ.

ಕರ್ನಾಟಕದಲ್ಲೂ ಮಾಸ್ಕ್ ಕಡ್ಡಾಯ ರದ್ದು ವಿಚಾರವಾಗಿ ಸಮಾಲೋಚನೆ ನಡೆಸುತ್ತೇವೆ. ಟಾಸ್ಕ್ ಪೋರ್ಸ್ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಸದ್ಯದಲ್ಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಿನೋಮಿಕ್ ಸ್ವೀಕ್ವೆನ್ಸ್ ಟೆಸ್ಟ್ ಬಗ್ಗೆ ಐಸಿಎಂಆರ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಹಲಾಲ್ ಸರ್ಟಿಫಕೇಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಲಾಲ್ ಬಗ್ಗೆ ಪ್ರತಿಕ್ರಿಯಿಸಿ ಪ್ರಮಾಣಿಕರಿಸೋ ಬಗ್ಗೆ ನಮ್ಮ ಇಲಾಖೆಗೆ ಏನೂ ಬರುವುದಿಲ್ಲ. ಆಯಾ ವ್ಯಾಪ್ತಿಯ ಕಮಿಷನರ್ ನಿರ್ಧಾರ ಮಾಡುವುದು. ಆರೋಗ್ಯ ಇಲಾಖೆ ವ್ಯಾಪ್ತಿಗೆ ಹಲಾಲ್ ಸರ್ಟಿಫಿಕೇಟ್ ಕೊಡುವುದು ಬರುವುದಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು