News Karnataka Kannada
Monday, April 29 2024
ಬೆಂಗಳೂರು ನಗರ

ಓದಿಗೆ ತಕ್ಕಂತೆ ಕೆಲಸ ಸಿಗದಿದ್ದರಿಂದ, ಬೈಕ್‌ ಕಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Arrest 22082021
Photo Credit :

ಬೆಂಗಳೂರು: ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಮೌಲಾಲಿ ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.’ಆಂಧ್ರಪ್ರದೇಶ ನಿವಾಸಿ ಮೌಲಾಲಿ, ಸಿವಿಲ್ ಎಂಜಿನಿಯರಿಂಗ್ ವಿಷಯದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡಿದ್ದ.

ಓದಿಗೆ ತಕ್ಕಂತೆ ಕೆಲಸ ಸಿಗದಿದ್ದರಿಂದ, ಬೈಕ್‌ ಕಳ್ಳತನಕ್ಕೆ ಇಳಿದಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆತನಿಂದ ₹ 15 ಲಕ್ಷ ಮೌಲ್ಯದ 10 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪರಪ್ಪನ ಅಗ್ರಹಾರ, ಸೂರ್ಯನಗರ, ಹೆಬ್ಬಗೋಡಿ ಹಾಗೂ ಆಂಧ್ರಪ್ರದೇಶದ ಬದ್ವೇಲ್, ತಿರುಪತಿ, ವಿಜಯವಾಡ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಬೈಕ್‌ಗಳನ್ನು ಕದ್ದಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಮನೆ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಗುರಿಯಾಗಿಸಿಕೊಂಡು ಆರೋಪಿ ಕೃತ್ಯ ಎಸಗುತ್ತಿದ್ದ. ಬೈಕ್‌ಗಳ ಲಾಕ್‌ ಮುರಿಯುವುದರಲ್ಲಿ ಪರಿಣತಿ ಹೊಂದಿದ್ದ.’

‘ಕರ್ನಾಟಕದಲ್ಲಿ ಕದ್ದ ಬೈಕ್‌ಗಳನ್ನು ಆಂಧ್ರಪ್ರದೇಶದಲ್ಲಿ ಆರೋಪಿ ಮಾರುತ್ತಿದ್ದ. ಆಂಧ್ರದಲ್ಲಿ ಕದ್ದ ಬೈಕ್‌ಗಳನ್ನು ಕರ್ನಾಟಕದಲ್ಲಿ ಮಾರಿ, ಹಣ ಗಳಿಸುತ್ತಿದ್ದ. ಇದೇ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ’ ಎಂದೂ ತಿಳಿಸಿವೆ.

ಮಾರಲು ಬಂದು ಸಿಕ್ಕಿಬಿದ್ದ: ‘ರಾಯಲ್‌ ಎನ್‌ಫೀಲ್ಡ್‌ ಹಾಗೂ ಇತರೆ ದುಬಾರಿ ಬೆಲೆಯ ಬೈಕ್‌ಗಳನ್ನಷ್ಟೇ ಆರೋಪಿ ಕದಿಯುತ್ತಿದ್ದ. ಅದೇ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದ. ಆಂಧ್ರದಲ್ಲಿ ಕದ್ದಿದ್ದ ಬೈಕನ್ನು ನಗರದಲ್ಲಿ ಮಾರಲು ಬಂದಿದ್ದಾಗ ಆರೋಪಿ ಸಿಕ್ಕಿಬಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು