News Karnataka Kannada
Thursday, May 02 2024
ಬೆಂಗಳೂರು ನಗರ

ಓಮಿಕ್ರಾನ್ ಸೋಂಕಿನ ಕಡಿವಾಣಕ್ಕೆ ಮತ್ತಷ್ಟು ಬಿಗಿ ಕ್ರಮಗಳ ಅಗತ್ಯ: ಸಚಿವ ಡಾ.ಸುಧಾಕರ್

Bjp's Dr K Sudhakar loses in Chikkaballapur
Photo Credit :

ಬೆಂಗಳೂರು: ಡೆಲ್ಟಾ ರೂಪಾಂತರಿಗಿಂತಲೂ ಹೆಚ್ಚು ವೇಗವಾಗಿ ಹರಡುತ್ತಿರುವ ಓಮಿಕ್ರಾನ್ ಸೋಂಕಿನ ಕಡಿವಾಣಕ್ಕೆ ಮತ್ತಷ್ಟು ಕಠಿಣ ಕ್ರಮಗಳ ಅಗತ್ಯವಿದ್ದು, ಓಮಿಕ್ರಾನ್‍ನಿಂದ ಬ್ರಿಟನ್ ಪರಿಸ್ಥಿತಿ ನೋಡಿದರೆ ಆತಂಕವಾಗುತ್ತದೆ. ವೇಗವಾಗಿ ಹರಡುವ ದೊಡ್ಡದಾದ ಈ ಸೋಂಕನ್ನು ನಮ್ಮಲ್ಲೂ ನಿಯಂತ್ರಿಸಬೇಕಿದೆ  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚೆ ಅಗತ್ಯ ಹಾಗಾಗಿ ಚಲನವಲನಗಳ ಮೇಲೆ ಜಾಗೃತೆ ವಹಿಸಬೇಕು. ಸರ್ಕಾರ ತೆಗೆದುಕೊಳ್ಳುವ ಬಿಗಿ ಕ್ರಮಗಳ ಬಗ್ಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.

ಕ್ರಿಸ್‍ಮಸ್, ಹೊಸ ವರ್ಷಾಚರಣೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರುವ ಬಗ್ಗೆ ಸದ್ಯಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಬಿಗಿ ಕ್ರಮಗಳ ಬಗ್ಗೆ ಮುಖ್ಯಮಂತ್ರಿಯವರು ಸಮಾಲೋಚನೆ ನಡೆಸುತ್ತಿದ್ದಾರೆ. ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ವಿದೇಶದಿಂದ ಬಂದವರನ್ನು ವಿಮಾನನಿಲ್ದಾಣದಲ್ಲಿ ಕ್ವಾರಂಟೈನ್ ಮಾಡಲು ಸದ್ಯಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ನಾವಿನ್ನೂ ಸಾಂಸ್ಥಿಕ ಕ್ವಾರಂಟೈನ್ ಅನ್ನು ಆರಂಭಿಸಿಲ್ಲ. ಓಮಿಕ್ರಾನ್ ಪತ್ತೆಯಾಗಲು ಏಳೆಂಟು ದಿನಗಳ ಅವಧಿ ಬೇಕಿಲ್ಲ, ಮೂರ್ನಾಲ್ಕು ದಿನಗಳ ವಿಂಡೋ ಅವಧಿಯಲ್ಲೇ ಪತ್ತೆಯಾಗಲಿದೆ. ಈ ಸಮಯದಲ್ಲಿ ವಿದೇಶದಿಂದ ಯಾರಾದರೂ ಬಂದರೆ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡಿದಾಗ ಫಾಲ್ಸ್ ನೆಗೆಟಿವ್ ಬರಲಿದೆ.

ಅವರು ಮನೆಗೆ ಹೋದ ಬಳಿಕ ಒಂದೆರಡು ದಿನಗಳಲ್ಲಿ ಪಾಸಿಟಿವ್ ಆಗುತ್ತಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರನ್ನು ಪ್ರತ್ಯೇಕವಾಗಿರಿಸಬೇಕು ಎಂಬ ಬೇಡಿಕೆ ಇದೆ. ಆದರೆ ನಾವಿನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಆ ವೇಳೆ ಅವರ ಮೇಲೆ ನಿಗಾವಹಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು