News Karnataka Kannada
Sunday, April 28 2024
ಬೆಂಗಳೂರು ನಗರ

ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ; ಸಚಿವ ಆರ್‌ ಅಶೋಕ್‌

Quick relief to farmers who have suffered crop losses
Photo Credit :

ಬೆಂಗಳೂರು : ಸುಮಾರು 15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡಿ ಜನತೆಗೆ ಅನುಕೂಲ ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಪ್ರಾರಂಭಿಸಲಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಕಡತಗಳು ಕೇವಲ ಕಾಗದ ಅಲ್ಲ. ಅದರಲ್ಲಿ ಜನರ ಹಿತ, ಭಾವನೆ ಅಡಕವಾಗಿದೆ ಎನ್ನುವುದು ನನ್ನ ಅಭಿಪ್ರಾಯ. ನಾನಾ ಕಾರಣಗಳಿಂದ ಇತ್ಯರ್ಥ ಆಗದೆ ಇದ್ದ ಹಳೆಯ ಕಡತಗಳನ್ನು 10 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ತೀರ್ಮಾನ ಮಾಡಬೇಕು. ಜನರ ಅಲೆದಾಟ ತಪ್ಪಿಸಬೇಕು. ಪ್ರಾಯೋಗಿಕವಾಗಿ ಗುರುವಾರ ಮೈಸೂರಿನಲ್ಲಿ ಪ್ರಾರಂಭಿಸುತ್ತಿದ್ದೇನೆ. ನಂತರ ರಾಜ್ಯಾದ್ಯಂತ ಈ ಅಭಿಯಾನವನ್ನು ಕಂದಾಯ ಇಲಾಖೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿಯೂ ಕಡತಗಳ ಸಮಸ್ಯೆ ಅರಿವಾಗಿತ್ತು. ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ಈ ಅಭಿಯಾನ ನಡೆಯಲಿದೆ. ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಇದರ ನೇತೃತ್ವ ವಹಿಸಲಿದ್ದಾರೆ. ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ಈ ಅಭಿಯಾನದಲ್ಲಿ ಕೆಲಸ ಮಾಡುತ್ತಾರೆ. ಕಂದಾಯ ಇಲಾಖೆಗೆ ಹೊಸ ದಿಕ್ಕನ್ನು ನೀಡಬೇಕು. ಕಂದಾಯ ಇಲಾಖೆ ಜನಸ್ನೇಹಿ ಇಲಾಖೆ ಆಗಿರಬೇಕು ಎನ್ನುವುದು ನನ್ನ ಆಶಯ ಎಂದು ಅಶೋಕ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು