News Karnataka Kannada
Monday, April 29 2024
ಬೆಂಗಳೂರು ನಗರ

ಕಂಬಳ ಅಸೋಸಿಯೇಷನ್ ರಚನೆಗೆ ಸರಕಾರದ ನಿರ್ಧಾರ

Basaraja Horatti
Photo Credit :
ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಶತಮಾನಗಳಿಂದ ಐತಿಹಾಸಿಕ ಪರಂಪರೆಯಿರುವ  ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಂಬಳ ಅಸೋಸಿಯೇಷನ್ ರಚಿಸುವ ತೀರ್ಮಾನ ತೆಗೆದು ಕೊಳ್ಳಲಾಗಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷದ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ  ಪ್ರಸ್ತಾಪಿಸಿದ ಹಿನ್ನಲೆಯಲ್ಲಿ ಸಭಾಪತಿಯವರ  ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು.
ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ  ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆದಿದೆ. ಈ ಸಭೆ ಯಶಸ್ವಿಯಾಗಿದ್ದು, ಕಂಬಳ ಅಸೋಸಿಯೇಷನ್ ರಚನೆಗೆ  ಮಹತ್ವದ ನಿರ್ಧಾರವಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷದ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು