News Karnataka Kannada
Thursday, May 09 2024
ಬೆಂಗಳೂರು ನಗರ

ಕನ್ನಡ ಕಡ್ಡಾಯ ಚರ್ಚೆಗೆ ತುರ್ತು ಅಧಿವೇಶನ: ವಾಟಾಳ್ ನಾಗರಾಜ್

Vatal Nagaraj
Photo Credit :

ಬೆಂಗಳೂರು : ‘ಪದವಿ ಹಂತದಲ್ಲಿ ಕನ್ನಡ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನೀಡಿದ ತಡೆಯಾಜ್ಞೆಯಿಂದ ಕನ್ನಡಿಗರಿಗೆ ಬರಸಿಡಿಲು ಬಡಿದಂತಾಗಿದೆ. ಈ ಕುರಿತು ಚರ್ಚಿಸಲು ತುರ್ತು ಅಧಿವೇಶನ ಕರೆಯಬೇಕು’ ಎಂದು ‘ಕನ್ನಡ ವಾಟಾಳ್‌’ ಪಕ್ಷದ ವಾಟಾಳ್ ನಾಗರಾಜ್ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನ್ಯಾಯಾಲಯದ ಮೇಲೆ ನಮಗೆ ಗೌರವ ಇದೆ. ಪದವಿಯಲ್ಲಿ ಕನ್ನಡ ಕಲಿಯಬಾರದು ಎನ್ನುವುದಾದರೆ ಮುಂದೆ ರಾಜ್ಯದ ಕನ್ನಡಿಗರ ಸ್ಥಿತಿ ಏನು. ಕನ್ನಡಿಗರ ಉದ್ಯೋಗ ಪರಿಸ್ಥಿತಿ ಏನು’ ಎಂದು ಅವರು ಪ್ರಶ್ನಿಸಿದರು.

‘ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡಕ್ಕೆ‌ ಮಾನ್ಯತೆ, ಗೌರವ ಸಿಗಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ. ಈ ವಿಚಾರಕ್ಕೆ ವಿಶೇಷ ಅಧಿವೇಶನ ನಡೆದರೆ, ಅಲ್ಲಿ ಕನ್ನಡಕ್ಕೆ ಎಷ್ಟು ಶಕ್ತಿ ತುಂಬಬಹುದು, ಯಾವ ರೀತಿ ಕಾನೂನು ಮಾಡಬಹುದು ಎಂಬ ಕುರಿತು ಚರ್ಚಿಸಬಹುದು’ ಎಂದರು.

‘ಕನ್ನಡ ಕಡ್ಡಾಯಗೊಳಿಸುವ ವಿಚಾರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸಾಹಿತ್ಯ ಪರಿಷತ್ತು, ಗಡಿ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಚಿಂತನೆ ನಡೆಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ (ಎನ್‌ಇಪಿ) ಪ್ರಾದೇಶಿಕ ಭಾಷೆಗಳಿಗೆ ಸವಾಲು ಎದುರಾಗಲಿದೆ. ಭಾಷಾವಾರು ಪ್ರಾಂತ್ಯಗಳು ಈ ಬಗ್ಗೆ ಸಮಗ್ರ ಚರ್ಚೆ ಮಾಡಬೇಕು. ಎನ್‌ಇಪಿಯಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು