ಬೆಂಗಳೂರು ನಗರ

ಕಮಿಷನ್ ಆರೋಪ: ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ-ಸಿಎಂ

ಬೆಂಗಳೂರು : ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ ಅವರಿಗೆ. ಎಲ್ಲಿ ಯಾರಿಗೆ ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ. ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.

”ಅವರ ಮಾತಿಗೆ ಬೆಲೆ ಕೊಡುತ್ತಿದ್ದೇವೆ, ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ಕೊಡಲಿ. ಅದರ ಆಳಕ್ಕೆ ಹೋಗುತ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.

”ಬೆಂಬಲ ಬೆಲೆ ಅಡಿ ರಾಗಿ ಖರೀದಿ ಮತ್ತಷ್ಟು ಹೆಚ್ಚಳ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ. ಕೆಲವು ಜಿಲ್ಲೆ ಗಳಲ್ಲಿ ರಾಗಿ ಖರೀದಿ ಮಾಡಬೇಕು ಎಂಬ ಒತ್ತಡ ಇತ್ತು. ಈಗಾಗಲೇ 2.1 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಿದ್ದೇವೆ. ಇದೀಗ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ತೀರ್ಮಾನ ಮಾಡಿದ್ದೇವೆ. ಒಟ್ಟು 487 ಕೋಟಿ ರೂ. ವೆಚ್ಚವಾಗಲಿದೆ” ಎಂದು ತಿಳಿಸಿದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago