News Karnataka Kannada
Wednesday, May 01 2024
ಬೆಂಗಳೂರು ನಗರ

ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ; ಬೇಸರ ಹೊರ ಹಾಕಿದ ವಾಟಾಳ್ ನಾಗರಾಜ್

Vatal Nagaraj
Photo Credit :

ಬೆಂಗಳೂರು : ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ ಎಂದು ಕನ್ನಡ ಚಳವಳಿ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಬುಧವಾರ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರ ಕವಿ ಕುವೆಂಪು ಸಾಹಿತ್ಯ ಬರೆದಿದ್ದಾರೆ. ಎಲ್ಲಾ ಸಭೆ ಸಮಾರಂಭಗಳಲ್ಲಿ ಈ ಹಾಡನ್ನ ಹೇಳುತ್ತಿದ್ದಾರೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಅಂತ ಸಾಲು ಇದೆ, ಇದು ಯಾರಿಗೂ ಅರ್ಥ ಆಗುತ್ತಿಲ್ಲ. ನಾಡಿಗೆ ಅಪಚಾರ ಆಗಬಾರದು, ಭವ್ಯ ನಾಡಿದು ಎಂದು ತೀವ್ರ ಬೇಸರ ಹೊರ ಹಾಕಿದರು.

ನಾವು ರಾಜ್ಯವನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಎಂದು ಅಂದುಕೊಂಡಿದ್ದಾರೆ.ಒಂದಾದ ಮೇಲೆ ಒಂದು ನಡೆಯುತ್ತಿದೆ. ಹಿಜಾಬ್, ದೇವಸ್ಥಾನ, ಹಲಾಲ್ ಕಟ್, ಜಟಕಾ ಕಟ್ ಬಂತು.ಈಗ ಮಾವಿನ ಹಣ್ಣು ವಿಚಾರ ಬಂದಿದೆ. ನಾನು ನಮ್ಮ ತೋಟದಲ್ಲಿ ಮಾವಿನ ಹಣ್ಣನ್ನ ಮುಸ್ಲಿಮರಿಗೆ ಕೊಟ್ಟಿದ್ದೇನೆ ಎಂದರು.

ಒಬ್ಬ ಯುವಕನ ಹತ್ಯೆಯಾಗಿದೆ.ಅದರ ಹೇಳಿಕೆ ಬಗ್ಗೆ ಗೃಹ ಸಚಿವರು ಇಂಟಲಿಜೆನ್ಸ್ ರಿಪೋರ್ಟ್ ಪಡೆದಿಲ್ಲ‌.ಅವರು ವಿಫಲ ಆಗಿದ್ದಾರೆ. ಉರ್ದು ಮಾತಾಡದಿದ್ದುದಕ್ಕೆ ಚೂರಿ ಇರಿದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಕನ್ನಡದವರು ಸುಮ್ಮನೆ ಕೂತಿದ್ದೀರಾ ಎಂದು ಹರಿದಾಡುತ್ತಿದೆ. ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿ ಬಳಿಕ ತಪ್ಪಾಯ್ತು ಅಂತ ಹೇಳಿದ್ದಾರೆ. ನಿಮಗೆ ಗೃಹ ಸಚಿವ ಸ್ಥಾನ ಕೊಡಲಾಗಿದೆ,‌ಯಾಕೆ ಕೊಟ್ಟಿದ್ದಾರೆ ಅನ್ನುವ ಚರ್ಚೆ ಬೇಡ. ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಡಿ.ರಾಜೀನಾಮೆ ಕೊಟ್ಟರೆ ನಿಮಗೂ ಘನತೆ. ಗೃಹಸಚಿವ ಸ್ಥಾನಕ್ಕೂ ಮಾನ ಉಳಿಯುತ್ತದೆ. ನೀವು ಸಣ್ಣ ಮಕ್ಕಳ ರೀತಿ ಹುಡುಗಾಟ ಆಡುತ್ತಿದ್ದೀರಾ? ಮುಖ್ಯಮಂತ್ರಿಗಳಿಗೆ ರಾಜೀನಾಮೆ ಕೊಟ್ಟು ಹೊರಡಿ ಎಂದು ಕಿಡಿ ಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು