ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ದಾವಣಗೆರೆ, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅಶೋಕ ಈ ವಿಷಯ ತಿಳಿಸಿದರು.
ಇಲ್ಲಿಯವರೆಗೆ, ಮಳೆಯಿಂದಾಗಿ 204 ಹೆಕ್ಟೇರ್ ಕೃಷಿ ಮತ್ತು 431 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ಸುಮಾರು 23 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ’ ಎಂದು ಅಶೋಕ ಹೇಳಿದರು.
ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಮತ್ತು ರಾಯಚೂರಿನಲ್ಲಿ ನಾಲ್ಕು ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಲಾಗುವುದು. ಪ್ರತ್ಯೇಕ ತಂಡವು ಬೆಂಗಳೂರಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಿದೆ ಎಂದು ಅಶೋಕ ಹೇಳಿದರು. ಪ್ರವಾಹ ಅಥವಾ ಭೂಕುಸಿತದ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಪ್ರತಿ ಜಿಲ್ಲೆಗಳಲ್ಲಿ ಸ್ಟ್ಯಾಂಡ್-ಬೈ ವಾಹನವನ್ನು ಸಿದ್ಧವಾಗಿಡಬೇಕು ಎಂದು ಅಶೋಕ ಅಧಿಕಾರಿಗಳಿಗೆ ತಿಳಿಸಿದರು. ಮನೆಗಳು ಮತ್ತು ಜಾನುವಾರುಗಳಿಗೆ ಹಾನಿಯಾದರೆ, ಪರಿಹಾರವನ್ನು 48 ಗಂಟೆಗಳ ಒಳಗೆ ತಲುಪಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.