News Karnataka Kannada
Monday, April 29 2024
ಬೆಂಗಳೂರು ನಗರ

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ

Ksrtc Bus 07082021
Photo Credit :

ಬೆಂಗಳೂರು : ಕರ್ನಾಟಕದ ವಾಹನಗಳ ಮೇಲೆ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕಲ್ಲು ತೂರಾಟ, ಮಸಿ ಬಳಿಯುತ್ತಿರೋ ಪ್ರಕರಣ ಹೆಚ್ಚಾದ ಕಾರಣದಿಂದಾಗಿ, ಸಾರಿಗೆ ಬಸ್ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಈ ಸಂಬಂಧ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಲ್ಲಿ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸೋ ಮುನ್ಸೂಚನೆಯಿದ್ದು, ಇದರ ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರೋದಾಗಿ ತಿಳಿಸಿದೆ.

ಇನ್ನೂ ರಾಯಚೂರು, ಬೆಳಗಾವಿ, ಕಲಬುರ್ಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಗಳು ತೆರಳೋದು ನಿಲುಗಡೆಯಾಗಿದೆ. ಈ ಮೂಲಕ ಸಾರಿಗೆ ಬಸ್ ಗಳ ಮೇಲೆ ಎಂಇಎಸ್ ಪುಂಡರಿಂದ ಹಾನಿಯಾಗೋದನ್ನು ತಪ್ಪಿಸಲು ಈ ಕ್ರಮವನ್ನು ಸಾರಿಗೆ ನಿಗಮ ಅನುಸರಿಸಿದೆ.

ಅಂದಹಾಗೇ ಇಂದು ಬೆಳಿಗ್ಗೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೈನಿಕರೊಬ್ಬರನ್ನು ಬಿಟ್ಟು ಬರಲು ತೆರಳಿದ್ದಂತ ಕಾರಿನ ಮೇಲೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದರು. ಕಾರಿನ ಗ್ಲಾಸ್ ಗಳನ್ನು ಪುಡಿ ಮಾಡಿ ದುಶ್ ಕೃತ್ಯವೆಸಗಿದ್ದರು. ಈ ಹಿನ್ನಲೆಯಲ್ಲಿ ಈಗ ಸಾರಿಗೆ ಬಸ್ ಸಂಚಾರ ಕೂಡ ಸ್ಥಗಿತಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು