ಬೆಂಗಳೂರು: ಶುಕ್ರವಾರ ಕರ್ನಾಟಕ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಸಿ ಆದೇಶ ಹೊರಡಿಸಿದೆ.
ಯೋಜನೆ, ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಟಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಡಿಪಿಎಆರ್ ಎಸಿಎಸ್ ವಿ ಮಂಜುಳಾ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಕುಮಾರ್ ನಾಯ್ಕ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್, ಕೆಪಿಸಿಎಲ್ ಎಂಡಿ ವಿ. ಪೊನ್ನುರಾಜ್, ಕೆಎಸ್ ಆರ್ಟಿಸಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಹುದ್ದೆ ಹೆಚ್ಚುವರಿ ಹೊಣೆ ಎಂ ಡಿ ಶಿವಯೋಗಿ ಸಿ ಕಳಸದ್, ಬಿಎಂಟಿಸಿ ಎಂಡಿ ಡಾ.ಎನ್ ವಿ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್, ಚೆಸ್ಕಾಂ ಎಂಡಿ ಡಾ.ಎಚ್.ಎನ್. ಗೋಪಾಲಕರಷ್ಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಪಿ.ವಸಂತಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.