News Karnataka Kannada
Wednesday, May 08 2024
ಬೆಂಗಳೂರು ನಗರ

ಕರ್ನಾಟಕವನ್ನ ರಾಹುಲ್ ಗಾಂಧಿ -ಸೋನಿಯಾ ಗಾಂಧೀಜಿಗೆ ಗೆಲ್ಲಿಸಿ ಕೊಡಬೇಕು : ಡಿಕೆಶಿ ಕರೆ

D K Shivakumar
Photo Credit :

ಬೆಂಗಳೂರು: ನಾವು ಬೈ ಎಲೆಕ್ಷನ್ ನಲ್ಲಿ ಉತ್ತಮ ಕೆಲಸ ಮಾಡಿದ್ವಿ. ರಾಹುಲ್ ಗಾಂಧಿಗೆ ನಾನು ಒಂದು ಮಾತನ್ನ ಹೇಳಲು ಬಯಸುತ್ತೇನೆ. ನಾನು ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗ್ತೇನೆ. ಎಐಸಿಸಿ ಏನು‌ ನಿರ್ಧಾರ ಮಾಡುತ್ತೆ, ಸೋನಿಯಾ ಜಿ ಹಾಗೂ ನೀವು ಏನು ನಿರ್ಧಾರ ಮಾಡ್ತೀರಿ ಅದನ್ನ ನಾನು ತಲೆ ಬಾಗಿ, ನೆರವೇರಿಸುವೆ.

ಷೇರಿಂಗ್ ಅಂಡ್ ಕೇರಿಂಗ್ ಇಲ್ಲದೆ ನಾವು ಏನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ. ನಾವು ಕರ್ನಾಟಕ ರಾಜ್ಯವನ್ನ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧೀಜಿಗೆ ಗೆಲ್ಲಿಸಿ ಕೊಡಬೇಕು.

ನಾವು ಮಾಡಲು ಸಾಕಷ್ಟು ಕೆಲಸ ಇದೆ. ನಾನು ನಮ್ಮ ಯಾವ ನಾಯಕರಿಗೂ ನಿದ್ರೆ ಮಾಡಲು ಬಿಟ್ಟಿಲ್ಲ. ನಿರುದ್ಯೋಗಿಗಳಿಗಾಗಿ ನಾವು ರ್ಯಾಲಿ ಮಾಡ್ತೀವಿ. ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಮಾಡ್ತಿವಿ. ತಿಂಗಳಲ್ಲಿ 15 ದಿನ ಕರ್ನಾಟಕದಲ್ಲಿ ಇರೋದಾಗಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ನಾವು ಗೆದ್ದೇ ಗೆಲ್ತೀವಿ ಎಂದು ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ಹೇಳಿದರು.

ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಾ ಡಿಕೆ ಶಿವಕುಮಾರ್ ಅವರು ಈ ಆಶಾಭಾವ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು