ಕಳವು ತಡೆಗಟ್ಟಲು ಗೋರಕ್ಷಣಾ ಸಮಿತಿ ರಚಿಸಿ: ಸಚಿವ ಪ್ರಭು ಬಿ.ಚವ್ಹಾಣ್

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳವು ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕೂಡಲೇ ಕ್ರಮಕೈಗೊಂಡು, ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗೋ ರಕ್ಷಣಾ ಸಮಿತಿ ರಚಿಸಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಜಿಲ್ಲಾಡಳಿತಗಳಿಗೆ ಪತ್ರ ಬರೆಯುವ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ನಿರಂತರವಾಗಿ ಗೋವುಗಳು ಕಳವು ಆಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಯನ್ನು ಸೂಕ್ಷ್ಮವಾಗಿ ಗಮಿನಿಸಿದ್ದೇನೆ. ಈ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು/ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಗೋ ರಕ್ಷಣಾ ಸಮಿತಿ ರಚಿಸಿ, ಗೋವುಗಳನ್ನು ಅಕ್ರಮವಾಗಿ ಸಾಗಿಸುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟು, ಚಲನ-ವಲನ ಆಧರಿಸಿ, ಈ ಭಾಗದಲ್ಲಿ ರಾತ್ರಿ ಮತ್ತು ಹಗಲು ಪಾಳಿಗಳಲ್ಲಿ ಪೊಲೀಸರ ಬೀಟುಗಳನ್ನು ಹೆಚ್ಚಿಸಿ, ಚೆಕ್ ಪೋಸ್ಟ್ ಗಳು/ ನಾಕಾ ಬಂಧಿಗಳನ್ನು ಪರಿಣಾಮಕಾರಿಯಾಗಿ ಬಲಗೊಳಿಇ, ತಪಾಸಣೆ ಮಾಡುವುದರಿಂದ ಗೋಪಾಲಕರಲ್ಲಿ ಇರುವ ಭಯದ ವಾತಾವರಣವನ್ನು ನಿರ್ಮೂಲನೆ ಮಾಡಿ ಸರಕಾರ ನಿಮ್ಮೊಂದಿಗೆ ಸದಾ ಇರಲಿದೆ ಎನ್ನುವ ಸಂದೇಶ ಸಾರಬೇಕಿದೆ.
ಈ ಭಾಗದಲ್ಲಿ ಗೋವುಗಳನ್ನು ಮಾರಾಟ ಮಾಡುವ ಮಾಲೀಕರು ಹಾಗೂ ಕೊಳ್ಳುವವರ ನಡುವೆ ಇ-ಛಾಪಾಕಾಗದದಲ್ಲಿ ಮುಚ್ಚಳಿಕೆ ಪ್ರಕ್ರಿಯೆ ಕೈಗೊಂಡು, ಮುಚ್ಚಳಿಕೆ ಪ್ರಮಾಣಪತ್ರದಲ್ಲಿ ಸಮಯ, ಅದಕ್ಕೆ ಸಂಬಂಧಿಸಿದಂತೆ ಮೊಬೈಲುಗಳಲ್ಲಿರುವ ‘ಡೇಟ್ ಕ್ಯಾಮೆರಾ ಆ್ಯಪ್’ಗಳಲ್ಲಿ ಸಮಯ ಸಮೇತ ಭಾವಚಿತ್ರವನ್ನು ಸೆರೆ ಹಿಡಿದುಕೊಂಡು ಗೋವುಗಳನ್ನು ಸಾಗಿಸುವ ವಾಹನಗಳು ಪೊಲೀಸರ ತಪಾಸಣೆ ಸಮಯದಲ್ಲಿ ಹಾಜರುಪಡಿಸಬೇಕು. ಹಾಗೊಂದು ವೇಳೆ ಸಂಶಯ ಬಂದಲ್ಲಿ ಈ ಕುರಿತು ತಪಾಸಣೆ ನಡೆಸಿದ ನಂತರದಲ್ಲಿ ಖಚಿತತೆ ಆಧಾರದ ಮೇರೆಗೆ ವಾಹನಗಳನ್ನು ಬಿಟ್ಟುಕಳುಹಿಸುವ ಬಗ್ಗೆ ಕೂಡಲೇ ಠಾಣಾಧಿಕಾರಿಗಳು ಸ್ಥಳೀಯವಾಗಿ ಕ್ರಮಕೈಗೊಳ್ಳಬೇಕು.

ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ತಂದರೂ ಗೋವುಗಳ ಕಳವು ಪ್ರಕರಣಗಳು ಮತ್ತು ಅಕ್ರಮ ಗೋವುಗಳ ಸಾಗಾಣಿಕೆ ಮುಂದುವರೆದಿದೆ. ನಿರಂತರವಾಗಿ ಗೋವುಗಳನ್ನು ಕಳವು ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಗಡಿ ಪಾರು ಮಾಡುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವುದರಿಂದ ಗೋವು ಕಳವು ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ‌ ದಿನಗಳಲ್ಲಿ ಗೋವುಗಳ ಕಳವು ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಗೋಪಾಲಕರ ಕುಟುಂಬಗಳನ್ನು ಕಳ್ಳರಿಂದ ರಕ್ಷಣೆ ಮಾಡಲು ವಿಫಲವಾದ ಪಕ್ಷದಲ್ಲಿ ಆ ಭಾಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಲು ಕ್ರಮಕೈಗೊಳ್ಳುವ ಬಗ್ಗೆ ಸರಕಾರದ ಹಂತದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡುವ ಮೂಲಕ ಗೋವುಗಳ ಕಳವು ಪ್ರಕರಣಗಳನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

36 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago