News Karnataka Kannada
Thursday, May 02 2024
ಬೆಂಗಳೂರು ನಗರ

ಕಾಂಗ್ರೆಸ್‌ ಕಟ್ಟಿ ಬೆಳೆಸಿರುವುದನ್ನು ಮಾರುವುದೇ ಬಿಜೆಪಿ ಕೆಲಸ: ಮಲ್ಲಿಕಾರ್ಜುನ ಖರ್ಗೆ

Mallikarjuna Karge
Photo Credit :

ಬೆಂಗಳೂರು: ಕಾಂಗ್ರೆಸ್‌ ದಶಕಗಳ ಕಾಲ ಕಟ್ಟಿ ಬೆಳೆಸಿರುವುದನ್ನು ಮಾರುತ್ತಿರುವುದೇ ಬಿಜೆಪಿ ಕೆಲಸವಾಗಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಸ್‌ಎನ್‌ಎಲ್‌ ಅನ್ನು ದುರ್ಬಲಗೊಳಿಸಿ ಬೇರೆಯವರಿಗೆ ಮಾರಲು ಹೊರಟಿದ್ದಾರೆ ಎಂದು ದೂರಿದರು.

ಬಿಜೆಪಿಯವರು ಕೇವಲ ಹೆಸರು ಬದಲಾವಣೆ ಮಾಡುವುದಷ್ಟೇ. ಇವರ ಸ್ವಂತ ಬಂಡವಾಳ ಯಾವುದೂ ಇಲ್ಲ. ಜೈಪುರದಲ್ಲಿ ಚಿಂತನ ಶಿಬಿರ ನಡೆಸುತ್ತಿದ್ದು, ಮೋದಿ ಅವರು ಮನೆ ಮನೆಗೆ ಹೋಗಿ ನಮ್ಮ ಕೆಲಸ ತಿಳಿಸಬೇಕು ಎಂದು ಹೇಳುತ್ತಿದ್ದಾರೆ. ಅಂದರೆ ಅವರು ಮಾಡಿರುವ ಕೆಲಸ ಜನರಿಗೆ ಗೊತ್ತೇ ಇಲ್ಲ. ಅವರು ಏನಾದರೂ ಮಾಡಿದ್ದರಲ್ಲವೇ ಗೊತ್ತಿರಲು ಎಂದು ಲೇವಡಿ ಮಾಡಿದರು.

ರಾಜೀವ್‌ ಗಾಂಧಿ ಯುವಕರಲ್ಲಿ ಚೈತನ್ಯ ಮೂಡಿಸಿದ ಮಹಾನ್‌ ನಾಯಕ. ವಿಯೆನ್ನಾದಲ್ಲಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಾತನಾಡಿದಾಗ ವಿಶ್ವದ ಅನೇಕ ನಾಯಕರು ದೇಶಗಳು ಆಕರ್ಷಿತರಾಗಿ ನಮ್ಮ ಅಲಿಪ್ತ ನೀತಿಗೆ ಬದ್ಧವಾಗಿ ರಷ್ಯಾ ಅಥವಾ ಅಮೆರಿಕ ಪರವಾಗಿ ನಿಲ್ಲಬಾರದು ಎಂಬ ಧೋರಣೆಯನ್ನು ಮುಂದುವರಿಸಿದರು ಎಂದು ಸ್ಮರಿಸಿದರು.

ಕರ್ನಾಟಕದಲ್ಲಿ ಲಕ್ಷಾಂತರ ಎಕರೆ ಜಮೀನನ್ನು ಬಡವರಿಗೆ ಹಂಚಲಾಯಿತು. 6.60 ಲಕ್ಷ ಜನರಿಗೆ ಟ್ರಿಬ್ಯುನಲ್‌ ರಚಿಸಿ ಬಡವರಿಗೆ ಭೂಮಿ ಕೊಟ್ಟೆವು. ಕರಾವಳಿ ಭಾಗದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದರೂ ಅವರೇ ಕಾಂಗ್ರೆಸ್‌ ವಿರುದ್ಧ ನಿಂತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ಸಲೀಂ ಅಹ್ಮದ್‌, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌,ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಚಿವರಾದ ಯು.ಟಿ ಖಾದರ್‌, ಎಚ್‌.ಆಂಜನೇಯ ಉಪಸ್ಥಿತರಿದ್ದರು.

ಈಗ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯ ಕ್ರಮ ಬದಲಾವಣೆ, ಸಮಾಜದಲ್ಲಿ ಬೆಂಕಿ ಹಚ್ಚುವುದು, ಸೂಲಿಬೆಲೆ ಹೇಳಿದ ಎಂಬ ಕಾರಣಕ್ಕೆ ಭಗತ್‌ ಸಿಂಗ್‌ ಅವರ ಪಠ್ಯವನ್ನು ತೆಗೆಯುತ್ತಿದ್ದೀರಿ. ಹೆಡೆYàವಾರ್‌ ನಡವಳಿಕೆಯಿಂದ ದೇಶ ಇಬ್ಭಾಗವಾಗುತ್ತಿದ್ದು, ಅಂಥವರ ವಿಚಾರವನ್ನು ಪಠ್ಯದಲ್ಲಿ ಯಾಕೆ ಸೇರಿಸಬೇಕು? ನಾರಾಯಣ ಗುರು ಅವರಂತಹ ವ್ಯಕ್ತಿಗಳ ಮಾಹಿತಿ ಮಕ್ಕಳಿಗೆ ನೀಡುತ್ತಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು