ಬೆಂಗಳೂರು ನಗರ

ಕಾಂಗ್ರೆಸ್‌ ಕಟ್ಟಿ ಬೆಳೆಸಿರುವುದನ್ನು ಮಾರುವುದೇ ಬಿಜೆಪಿ ಕೆಲಸ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕಾಂಗ್ರೆಸ್‌ ದಶಕಗಳ ಕಾಲ ಕಟ್ಟಿ ಬೆಳೆಸಿರುವುದನ್ನು ಮಾರುತ್ತಿರುವುದೇ ಬಿಜೆಪಿ ಕೆಲಸವಾಗಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಸ್‌ಎನ್‌ಎಲ್‌ ಅನ್ನು ದುರ್ಬಲಗೊಳಿಸಿ ಬೇರೆಯವರಿಗೆ ಮಾರಲು ಹೊರಟಿದ್ದಾರೆ ಎಂದು ದೂರಿದರು.

ಬಿಜೆಪಿಯವರು ಕೇವಲ ಹೆಸರು ಬದಲಾವಣೆ ಮಾಡುವುದಷ್ಟೇ. ಇವರ ಸ್ವಂತ ಬಂಡವಾಳ ಯಾವುದೂ ಇಲ್ಲ. ಜೈಪುರದಲ್ಲಿ ಚಿಂತನ ಶಿಬಿರ ನಡೆಸುತ್ತಿದ್ದು, ಮೋದಿ ಅವರು ಮನೆ ಮನೆಗೆ ಹೋಗಿ ನಮ್ಮ ಕೆಲಸ ತಿಳಿಸಬೇಕು ಎಂದು ಹೇಳುತ್ತಿದ್ದಾರೆ. ಅಂದರೆ ಅವರು ಮಾಡಿರುವ ಕೆಲಸ ಜನರಿಗೆ ಗೊತ್ತೇ ಇಲ್ಲ. ಅವರು ಏನಾದರೂ ಮಾಡಿದ್ದರಲ್ಲವೇ ಗೊತ್ತಿರಲು ಎಂದು ಲೇವಡಿ ಮಾಡಿದರು.

ರಾಜೀವ್‌ ಗಾಂಧಿ ಯುವಕರಲ್ಲಿ ಚೈತನ್ಯ ಮೂಡಿಸಿದ ಮಹಾನ್‌ ನಾಯಕ. ವಿಯೆನ್ನಾದಲ್ಲಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಾತನಾಡಿದಾಗ ವಿಶ್ವದ ಅನೇಕ ನಾಯಕರು ದೇಶಗಳು ಆಕರ್ಷಿತರಾಗಿ ನಮ್ಮ ಅಲಿಪ್ತ ನೀತಿಗೆ ಬದ್ಧವಾಗಿ ರಷ್ಯಾ ಅಥವಾ ಅಮೆರಿಕ ಪರವಾಗಿ ನಿಲ್ಲಬಾರದು ಎಂಬ ಧೋರಣೆಯನ್ನು ಮುಂದುವರಿಸಿದರು ಎಂದು ಸ್ಮರಿಸಿದರು.

ಕರ್ನಾಟಕದಲ್ಲಿ ಲಕ್ಷಾಂತರ ಎಕರೆ ಜಮೀನನ್ನು ಬಡವರಿಗೆ ಹಂಚಲಾಯಿತು. 6.60 ಲಕ್ಷ ಜನರಿಗೆ ಟ್ರಿಬ್ಯುನಲ್‌ ರಚಿಸಿ ಬಡವರಿಗೆ ಭೂಮಿ ಕೊಟ್ಟೆವು. ಕರಾವಳಿ ಭಾಗದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದರೂ ಅವರೇ ಕಾಂಗ್ರೆಸ್‌ ವಿರುದ್ಧ ನಿಂತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ಸಲೀಂ ಅಹ್ಮದ್‌, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌,ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಚಿವರಾದ ಯು.ಟಿ ಖಾದರ್‌, ಎಚ್‌.ಆಂಜನೇಯ ಉಪಸ್ಥಿತರಿದ್ದರು.

ಈಗ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯ ಕ್ರಮ ಬದಲಾವಣೆ, ಸಮಾಜದಲ್ಲಿ ಬೆಂಕಿ ಹಚ್ಚುವುದು, ಸೂಲಿಬೆಲೆ ಹೇಳಿದ ಎಂಬ ಕಾರಣಕ್ಕೆ ಭಗತ್‌ ಸಿಂಗ್‌ ಅವರ ಪಠ್ಯವನ್ನು ತೆಗೆಯುತ್ತಿದ್ದೀರಿ. ಹೆಡೆYàವಾರ್‌ ನಡವಳಿಕೆಯಿಂದ ದೇಶ ಇಬ್ಭಾಗವಾಗುತ್ತಿದ್ದು, ಅಂಥವರ ವಿಚಾರವನ್ನು ಪಠ್ಯದಲ್ಲಿ ಯಾಕೆ ಸೇರಿಸಬೇಕು? ನಾರಾಯಣ ಗುರು ಅವರಂತಹ ವ್ಯಕ್ತಿಗಳ ಮಾಹಿತಿ ಮಕ್ಕಳಿಗೆ ನೀಡುತ್ತಿಲ್ಲ ಎಂದರು.

Gayathri SG

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

4 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

11 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

18 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

30 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

35 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

49 mins ago