ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಯಾವುದೇ ಜನಪರ ಯೋಜನೆ ಕೈಗೆತ್ತಿಕೊಂಡರೂ ಕಾಂಗ್ರೆಸ್ ನವರು ವಿರೋಧಿಸಿ, ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಿಡಿಕಾರಿದರು.
ಶನಿವಾರ ನಗರದಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಕೊರೋನಾ ಲಸಿಕೆ ವಿರುದ್ಧ ಅಪಪ್ರಚಾರ ಮಾಡಿ, ಜನರಲ್ಲಿ ಗೊಂದಲ ಮೂಡಿಸಿದರು, ಆದರೆ ಅವರೇ ಮೊದಲು ಲಸಿಕೆ ಯನ್ನು ಪಡೆದರು. ಈಗ ಮಾಡಲು ಬೇರೆ ಕೆಲಸ ವಿಲ್ಲದ ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ, ಬುರುಡೆ ಬಿಡುತ್ತಿದ್ದಾರೆ ಎಂದರು.
ಪ್ರತಿಯೊಬ್ಬ ರು ಸ್ವಾಭಿಮಾನಿಗಳಾಗಿ, ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲಬೇಕು. ಆ ಮೂಲಕ ಸ್ವಾವಲಂಬಿ, ಸ್ವಾಭಿಮಾನ ಭಾರತ ನಿರ್ಮಾಣ ಮಾಡಬೇಕು. ಹಾಗಾದರೆ ಮಾತ್ರ ಭಾರತ ಯಶಸ್ವಿ ರಾಷ್ಟ್ರವಾಗಲು ಸಾಧ್ಯ ವಾಗುತ್ತದೆ ಎಂದು ತಿಳಿಸಿದರು.
ಭಾರತ ಆತ್ಮನಿರ್ಭರ, ಸ್ವಾಭಿಮಾನಿ ದೇಶವಾಗಬೇಕಾದರೆ, ಗ್ರಾಮಮಟ್ಟದಲ್ಲಿ ಜನಪ್ರತಿನಿಧಿಗಳು ಗ್ರಾಮ ಸೇವಕರಾಗಿ ಜವಾಬ್ದಾರಿ ಯಿಂದ ಕೆಲಸ ಮಾಡಬೇಕು. ಗ್ರಾ.ಪಂ ಸದಸ್ಯರು ಪ್ರತಿ ಮನೆಗೆ ನೀರು, ವಿದ್ಯುತ್, ಸೋಲಾರ್ ಲೈಟ್ ಅಳವಡಿಕೆ ಮುಂತಾದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.