News Karnataka Kannada
Friday, May 03 2024
ಬೆಂಗಳೂರು ನಗರ

ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಬೆಂಕಿ ಹಚ್ಚುವುದೊಂದೇ ಬಾಕಿ: ಈಶ್ವರಪ್ಪ

Photo Credit :

ಬೆಂಗಳೂರು,ಜೂ.4: ಹನುಮನ ಬಾಲಕ್ಕೆ ರಾವಣ ಬೆಂಕಿ ಹಚ್ಚಿದ ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ. ಇನ್ನು ಬೆಂಕಿ ಹಚ್ಚುವುದೊಂದೆ ಬಾಕಿ..!

ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ನೀಡಿರುವ ಎಚ್ಚರಿಕೆ. ರಾಜ್ಯಾದ್ಯಂತ ಚಡ್ಡಿ ಸುಡುತ್ತೇವೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯನವರಿಗೆ ಟ್ವಿಟರ್‍ನಲ್ಲಿ ತಿರುಗೇಟು ನೀಡಿರುವ ಈಶ್ವರಪ್ಪ, ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ. ಇಡೀ ಲಂಕೆಯೇ ಸುಟ್ಟು ಹೋಯಿತು. ಜನರಿಂದ ತಿರಸ್ಕೃತವಾಗಿರುವ ಕಾಂಗ್ರೆಸ್‍ನ್ನು ಈಗಾಗಲೇ ಚಟ್ಟದಲ್ಲಿಟ್ಟಿದ್ದಾರೆ. ಇನ್ನೇನು ಬೆಂಕಿ ಹಚ್ಚುವುದೊಂದೇ ಕೆಲಸ ಎಂದಿದ್ದಾರೆ.

ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ? ಚಡ್ಡಿಗೆ ನೀವು ಬೆಂಕಿ ಹಚ್ಚಿ ನೋಡಿ, ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ ಎಸ್‍ಎಸ್ ತಂಟೆಗೆ ಬರಬೇಡಿ ಹುಷಾರ್! ಎಂದು ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು