ನಾಗಮಂಗಲ: ಕಾಂಗ್ರೆಸ್ ಪಕ್ಷ ತನ್ನದೇ ಆದ ಇತಿಹಾಸ ಹೊಂದಿದ್ದು ಪಕ್ಷದ ತತ್ವ ಸಿದ್ಧಾಂತವನ್ನು ಮನೆಮನೆಗೆ ತಲುಪಿಸಿ ಸದಸ್ಯತ್ವ ಮಾಡಿಸುವ ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕೈಜೋಡಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಾಗಮಂಗಲ ತಾಲೂಕಿನಲ್ಲಿ ನಾಗಮಂಗಲ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜನೆ ಮಾಡಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆ ಜನಜಾಗೃತಿ ಉದ್ಘಾಟನೆ ಮಾಡುತ್ತಾ ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ ತನ್ನದೇ ಆದ ಇತಿಹಾಸ ಹೊಂದಿರುವ ಪಕ್ಷವಾಗಿದ್ದು, ಅನೇಕ ಸಾಧಕರನ್ನು ಒಳಗೊಂಡಿದ್ದ ಪಕ್ಷ ಇಂದಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಒಲವು ಇದ್ದು ಬಹುದೊಡ್ಡ ಸಂಖ್ಯೆಯಲ್ಲಿ ಪಕ್ಷಕ್ಕೆ ಬರುವವರು ಇದ್ದಾರೆ ಎಂದರು.
ಪಕ್ಷದ ಬಲವರ್ಧನೆಗಾಗಿ ಹಾಗೂ ಪಕ್ಷವನ್ನು ರಾಜ್ಯಮಟ್ಟದಲ್ಲಿ ಅಧಿಕಾರಕ್ಕೆ ತರುವ ಮುಖಾಂತರ ತಮ್ಮಗಳ ಜನೋಪಯೋಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸದಸ್ಯತ್ವ ಅಭಿಯಾನ ಮಾಡುವ ಮುಖಾಂತರ ಪಕ್ಷವನ್ನು ಕಟ್ಟಲು ಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಮುಂಬರುವ ಚುನಾವಣೆಗಳಲ್ಲಿ ಆಕಾಂಕ್ಷಿಗಳು ಮನೆಮನೆಗೆ ತೆರಳಿ ಆಕಾಂಕ್ಷೆಗಳನ್ನು ಸದಸ್ಯತ್ವ ಮಾಡುವಂತೆ ಮನವಿ ಮಾಡಿದರು.
ಮಂಡ್ಯ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಹಾಗೂ ಈಗಾಗಲೇ ಮಂಡ್ಯ ಜಿಲ್ಲೆಯಿಂದಲೇ ಕಾಂಗ್ರೆಸ್ ಪರ್ವ ಆಶೀರ್ವದಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ತರಲು ಈ ಜಿಲ್ಲೆಯ ಜನತೆ ಸಹಕಾರ ವಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಮೇಕೆದಾಟು ಯೋಜನೆಯ ಜಾರಿಗೊಳಿಸುವಂತೆ ಪಾದಯಾತ್ರೆ ಹಮ್ಮಿಕೊಂಡಿದ್ದು ತಾವುಗಳು ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು
ಮಂಡ್ಯ ಜಿಲ್ಲೆಯಲ್ಲಿ ಸದಸ್ಯತ್ವ ನೋಂದಣಿ ಸಂಖ್ಯೆ ಅತಿ ಹೆಚ್ಚು ಮಾಡುವ ಮುಖಾಂತರ ಪ್ರತಿ ತಾಲೂಕಿನಲ್ಲಿಯೂ ಸದಸ್ಯರ ಸಂಖ್ಯೆ ಹಾಗೂ ಪಕ್ಷದ ಬಲವರ್ಧನೆ ಯನ್ನು ಪ್ರಾಮಾಣಿಕವಾಗಿ ಮಾಡಿಸುವ ಕೆಲಸವನ್ನು ಹಾಗೂ ಪಕ್ಷದ ಸಂಘಟನೆಯ ಯುವಕರನ್ನು ಮುಂಚೂಣಿಗೆ ತರಲು ಮಾಜಿ ಸಚಿವರಾದ ಚೆಲುವರಾಯ ಸ್ವಾಮಿಯವರು ತಿಳಿಸಿದರು
ಇದೇ ಸಂದರ್ಭದಲ್ಲಿ ಧ್ರುವನಾರಾಯಣ್, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿ ಗೌಡ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಚಂದ್ರಶೇಖರ್ , ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ತಾಲೂಕು ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು ಇದ್ದರು.