ಬೆಂಗಳೂರು: ಉಪಚುನಾವಣೆಯಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಕಾಂಗ್ರೆಸ್ ನ ಬಂಡಾಯದ ಲಾಭವಾಗುವಂತಹ ಲಕ್ಷಣಗಳು ಕಾಣಿಸುತ್ತಿದೆ.
ಉಪಚುನಾವಣೆಗೆ ಪಕ್ಷವು ನಿರ್ಧರಿಸಿದ್ದ ಸ್ಟಾರ್ ಪ್ರಚಾಕರಲ್ಲಿ ಸಿ.ಎಂ. ಇಬ್ರಾಹಿಂ ಅವರು ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಮೂಲಗಳು ಹೇಳಿವೆ. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಮುನಿಸಿಕೊಂಡು ಅವರು ಪ್ರಚಾರದಿಂದ ದೂರ ಉಳಿದಿರುವರು ಎಂದು ವರದಿಗಳು ಹೇಳಿವೆ.
ಶಿವಾಜಿನಗರದಿಂದ ತನಗೆ ಕಾಂಗ್ರೆಸ್ ಟಿಕೆಟ್ ನೀಡದೆ ಇರುವ ಹಿನ್ನೆಲೆಯಲ್ಲಿ ಅವರು ಪ್ರಚಾರಕ್ಕೆ ಹೋಗಿಲ್ಲ ಮತ್ತು ಅವರು ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.