ಕಾಂಗ್ರೆಸ್ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ, ನಮಗೆ ಯಾವುದೇ ಅಧಿಕಾರ ಕೊಡುತ್ತಿಲ್ಲ ಎಂದು ಆರೋಪಿಸಿ ತಮ್ಮ ಎಂಎಲ್ʼಸಿ ಸ್ಥಾನ ಹಾಗೂ ಕಾಂಗ್ರೆಸ್ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ವಾಭಿಮಾನದಿಂದ ಕಾಂಗ್ರೆಸ್ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ಇದನ್ನು ಅಂಗೀಕರಿಸಬಹುದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ಆದರೆ ಅವರೇ ಕೆಲವರನ್ನು ಪಕ್ಷದಿಂದ ಹೊರ ಹಾಕುತ್ತಿದ್ದಾರೆ. ಅದಕ್ಕೆ ನಾನು ನನ್ನನ್ನು ಹೊರ ಹಾಕುವ ಮೊದಲೇ ಪಕ್ಷ ತೊರೆಯುತ್ತಿದ್ದೇನೆ.
ನನ್ನ ಮುಂದಿನ ನಿರ್ಣಯಗಳನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡ, ಕುಮಾರ್ ಸ್ವಾಮಿ ಹಾಗೂ ರೇವಣ್ಣ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
1995ರಂತೆ ಈಗಲೂ ಕಂಡುಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳುತ್ತಿದೆ. ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ.
ಕಾಂಗ್ರೆಸ್ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಲೂವುದಿಲ್ಲ. ನಮ್ಮನ್ನು ಪಕ್ಷದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಅಧಿಕಾರ ಕೊಡುತ್ತಿಲ್ಲ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…