ಬೆಂಗಳೂರು : ಕಾರುಗಳ ಮೇಲೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಲಾಭಾಂಶ ನೀಡುವುದಾಗಿ ಹೇಳಿ ಜನರಿಂದ ₹ 1.60 ಕೋಟಿ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಣ ಹೂಡಿಕೆ ಮಾಡಿ ವಂಚನೆಗೀಡಾಗಿರುವ ಉದ್ಯಮಿ ಮಧುಸೂದನ್ ದೂರು ನೀಡಿದ್ದಾರೆ. ‘ಸ್ಟೆರ್ಲಿಂಗ್ ಕ್ಯಾಬ್ಸ್’ ಕಂಪನಿಯ ಕೆ.ಜಿ. ಎಡ್ವಿನ್, ವಿನಯ್, ರಾಘವೇಂದ್ರ, ಮಹೇಶ್ ಶೆಟ್ಟಿ, ರವಿಕುಮಾರ್, ಮಣಿ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘2021ರಲ್ಲಿ ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಮ್ಮದು ಸ್ಟೆರ್ಲಿಂಗ್ ಕ್ಯಾಬ್ಸ್ ಕಂಪನಿ ಇದೆ. ಕಾರುಗಳನ್ನು ಸಾಫ್ಟ್ವೇರ್ ಹಾಗೂ ಇತರೆ ಕಂಪನಿಗಳಿಗೆ ಬಾಡಿಗೆ ನೀಡುತ್ತಿದ್ದೇವೆ. ಒಂದು ಕಾರಿನ ಮೇಲೆ ₹ 4 ಲಕ್ಷ ಹೂಡಿಕೆ ಮಾಡಿದರೆ, ಅದರ ಬಾಡಿಗೆಯಿಂದ ಬರುವ ಹಣದಲ್ಲಿ ಪ್ರತಿ ತಿಂಗಳು ₹ 20 ಸಾವಿರ ನೀಡಲಾಗುವುದು. 48 ತಿಂಗಳ ಬಳಿಕ ಕಾರನ್ನೂ ವಾಪಸು ಕೊಡಲಾಗುವುದು’ ಎಂಬುದಾಗಿ ಹೇಳಿದ್ದರು. ಅದನ್ನು ನಂಬಿದ್ದ ದೂರುದಾರ, ಹಣ ಹೂಡಿಕೆ ಮಾಡಿದ್ದರು.’
‘ಆರೋಪಿಗಳು ಮೂರು ತಿಂಗಳು ಮಾತ್ರ ಹಣ ನೀಡಿದ್ದರು. ನಂತರ ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಲು ಆರೋಪಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಮಧುಸೂದನ್ ದೂರಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
‘ಕಂಪನಿಯಲ್ಲಿ 40ಕ್ಕೂ ಹೆಚ್ಚು ಮಂದಿ ₹ 1.60 ಕೋಟಿ ಹೂಡಿಕೆ ಮಾಡಿದ್ದು, ಬಹುತೇಕರಿಗೆ ವಂಚನೆಯಾಗಿರುವ ಮಾಹಿತಿ ಇದೆ’ ಎಂದೂ ಹೇಳಿವೆ.
ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.
ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…