ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಇಲ್ಲಿನ ಶ್ರೀಕಾಶಿ ಮಠಕ್ಕೆ ಭೇಟಿ ನೀಡಿ, ಕಾಶಿ ಮಠಾಧೀಶ ಶ್ರೀಮದ್ ಸಮ್ಯಮೀಂದ್ರತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಬೆಂಗಳೂರಿಗೆ ಆಗಮಿಸಿರುವ ಡಾ. ಭಾಗವತ್ ಅವರು ಕಾಶಿ ಮಠ ಸಂಸ್ಥಾನಕ್ಕೆ ಭೇಟಿ ನೀಡಿದರು. ಉಭಯ ಕುಶಲೋಪರಿ ನಡೆಸಿದ ನಂತರ, ಮಠದ ವತಿಯಿಂದ ಅವರನ್ನು ಗೌರವಿಸಲಾಯಿತು.