News Karnataka Kannada
Sunday, May 19 2024
ಬೆಂಗಳೂರು ನಗರ

ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿದಂತೆ 13 ಆರೋಪಿಗಳ ಖುಲಾಸೆ

Photo Credit :

  ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿದಂತೆ 13 ಆರೋಪಿಗಳ ಖುಲಾಸೆ

ಬೆಂಗಳೂರು: ಮೈನಿಂಗ್ ಕಂಪನಿಗೆ ಪರವಾನಿಗೆ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ಬಿಎಸ್ ಯಡಿಯೂರಪ್ಪ, ಬಿಎಸ್ ವೈ ಪುತ್ರರಾದ ಬಿವೈ ರಾಘವೇಂದ್ರ, ಬಿವೈ ವಿಜಯೇಂದ್ರ, ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಜಿಂದಾಲ್ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ಪ್ರಕರಣದ ಎಲ್ಲ ಆರೋಪಿಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ಮೊದಲು ಬಿಎಸ್ ವೈ ಪರ ವಾದ ಮಂಡಿಸಿದ್ದ ವಕೀಲ ಸಿವಿ ನಾಗೇಶ್ ಅವರು, ಯಡಿಯೂರಪ್ಪ ಅವರ ವಿರುದ್ಧ ದುರುದ್ದೇಶಪೂರಕವಾಗಿ ಆರೋಪ ಹೊರಿಸಲಾಗಿದೆ. ಯಡಿಯೂರಪ್ಪ ಅವರು ಯಾವುದೇ ಸಂದರ್ಭದಲ್ಲೂ ತಮ್ಮ ಅಧಿಕಾರವನ್ನು ಮತ್ತು ಮುಖ್ಯಮಂತ್ರಿಗಳ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿಲ್ಲ ಎಂದು ವಾದಿಸಿದ್ದರು.

ಸುಮಾರು 400 ಪುಟಗಳ ತೀರ್ಪಿನ ಪ್ರಮುಖ ಅಂಶವನ್ನು ಮಾತ್ರ ಓದಿದ ನ್ಯಾಯಮೂರ್ತಿ ಅರ್ ಬಿ ಧರ್ಮಗೌಡರ್ ಅವರು, “ಬಿಎಸ್ ವೈ ಸೇರಿದಂತೆ ಎಲ್ಲ 13 ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದರು. ಅಂತೆಯೇ ಎಲ್ಲ 13 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಹೇಳಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು