ಬೆಂಗಳೂರು: ವಾಹನ ಚಾಲಕರನ್ನು ಗುರಿಯಾಗಿರಿಸಿಕೊಂಡು ದರೋಡೆ ನಡೆಸುತ್ತಿದ್ದ ಕುಖ್ಯಾತ ದರೋಡೆಕೋರರಿಬ್ಬರ ಮೇಲೆ ಪೊಲೀಸರು ಭಾನುವಾರ ನಸುಕಿನ ವೇಳೆ ಪೊಲೀಸರು ಗುಂಡು ಹಾರಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ.
ಕೆ.ಆರ್. ಪುರ ಠಾಣೆಯ ಇನ್ಸ್ ಪೆಕ್ಟರ್ ಜಯರಾಜ್ ಅವರ ತಂಡವು ಕಾಗೆ ಸೋಣೆನಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ ನವೀನ್ ಮತ್ತು ಗಿರೀಶ್ ಎಂಬಿಬ್ಬರನ್ನು ಬಂಧಿಸಿದರು.
ಆರೋಪಿಗಳಿಬ್ಬರ ಕಾಲಿಗೆ ಗುಂಡು ತಗುಲಿದ್ದು, ಇವರನ್ನು ಕಾಡುಗೋಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳ ದಾಳಿಗೆ ಪೇದೆಯೊಬ್ಬರು ಗಾಯಗೊಂಡಿದ್ದಾರೆ.