ಬೆಂಗಳೂರು : ಒಂಟಿಯಾಗಿ ಓಡಾಡುವರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಕುಖ್ಯಾತ ರೌಡಿ ರೌಡಿ ಫರ್ವೇಜ್ ಗೆ ಸಿದ್ದಾಪುರ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಪೊಲೀಸರ ಗುಂಡೇಟಿನಿಂದ ಕಾಲಿಗೆ ಗಾಯಗೊಂಡ ಜೆಜೆ ನಗರ ರೌಡಿಶೀಟರ್ ಫರ್ವೇಜ್ ಪಾಷ(24) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಆರೋಪಿ ಫರ್ವೇಜ್ ಕಳೆದ ಡಿಸೆಂಬರ್ 30ರಂದು ಲಾಲ್ಬಾಗ್ ಬಳಿ ಬೈಕ್ನಲ್ಲಿ ತನ್ನ ಸಹಚರನ ಜೊತೆ ಬಂದು ದಾರಿಹೋಕರ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿ ಪತ್ತೆ ಹಚ್ಚಿ ಇಂದು ತಲಘಟ್ಟಪುರದ ಬಳಿ ಆರೋಪಿಯನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಅಂತೋನಿ ರಾಜ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಫರ್ವೇಜ್ ಈ ಹಿಂದೆ ಹಿಂದೆ ಪಾದರಾಯನಪುರ ಗಲಾಟೆಯಲ್ಲಿ ಪ್ರಮುಖ ಆರೋಪಿಯಾಗಿದ್ದ.