ವಿಧಾನ ಪರಿಷತ್ ಚುನಾವಣೆಯಲ್ಲಿ ಬೈರತಿ ಸುರೇಶ್ ಮತ್ತು ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ಡೀಲ್ ನಡೆದಿತ್ತು ಎಂದು ಜಮೀರ್ ಅಹಮದ್ ಖಾಣ್ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ‘ಅಲ್ಪಸಂಖ್ಯಾತರ ಟರ್ಮಿನೇಟರ್’ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಶನಿವಾರ ಟೀಕಿಸಿದ್ದರು. ಈ ಬಗ್ಗೆ ಇಂದು (ಭಾನುವಾರ) ಸರಣಿ ಟ್ವೀಟ್ ಮಾಡಿರುವ ಜಮೀರ್ ಅಹಮದ್, ನಿದರ್ಶನಗಳ ಸಹಿತ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ ಅವರಲ್ಲ, ಕುಮಾರಸ್ವಾಮಿ . ಆ ವಿಧಾನಪರಿಷತ್ ಚುನಾವಣೆಯಲ್ಲಿ ಭೈರತಿ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ಆಗ ಏಳೆಂಟು ಹೆಚ್ಚುವರಿ ಮತಗಳಿದ್ದವು. ಅದನ್ನು ಭೈರತಿ ಸುರೇಶ್ ಅವರಿಗೆ ಮಾರಾಟ ಮಾಡಿದ್ದು ಯಾರೆಂದು ನೆನಪಿದೆಯಾ? ಎಂದು ಮನವರಿಕೆ ಮಾಡಿದ್ದಾರೆ.