News Karnataka Kannada
Friday, May 10 2024
ಬೆಂಗಳೂರು ನಗರ

ಕುಮಾರಸ್ವಾಮಿ ಅವರೇ ಬಿಜೆಪಿ ಸೋಲಿಸಲು ನಮಗೆ ಬೆಂಬಲ ನೀಡಿ: ಸಿದ್ದರಾಮಯ್ಯ

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ.
Photo Credit :

ಬೆಂಗಳೂರು: ಎಚ್​.ಡಿ.ಕುಮಾರಸ್ವಾಮಿ ಅವರೇ ಬಿಜೆಪಿಯನ್ನು ಸೋಲಿಸಬೇಕಾ? ಹಾಗದ್ರೆ ನಮಗೆ ಬೆಂಬಲ ನೀಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ಜೆಡಿಎಸ್​ಗೆ  ಆಫರ್​ ಇಟ್ಟಿದ್ದಾರೆ.

ರಾಜ್ಯಸಭೆ ಚುನಾವಣೆಗೆ ನಾಳೆ ಮತನಾದ ನಡೆಯಲಿದ್ದು, 4 ನೇ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷದವರ ಬಳಿಯೂ ಬಹುಮತ ಇಲ್ಲ.

ಕೊನೇ ಹಂತದ ಕಸರತ್ತು ನಡೆಯುತ್ತಿದ್ದು, ಜೆಡಿಎಸ್​ ಶಾಸಕರಿಗೆ ಕಾಂಗ್ರೆಸ್​ ಗಾಳ ಹಾಕಿದೆ. ಈ ಬಗ್ಗೆ ಗುರುವಾರ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್​ನಲ್ಲಿ 80 ಶಾಸಕರು ಇದ್ದಾಗಲೇ ಎಚ್​ಡಿಕೆ ಅವರನ್ನು ನಾವು ಸಿಎಂ ಮಾಡಿದ್ದೇವೆ. ಈ ಬಾರಿ ರಾಜ್ಯಸಭೆ ಚುನಾವಣೆಯ 4ನೇ ಅಭ್ಯರ್ಥಿಯನ್ನಾಗಿ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದೇವೆ. ಕುಮಾರಸ್ವಾಮಿ ಅವರೇ ನಮಗೆ ಬೆಂಬಲ ನೀಡಿ. ಆ ಮೂಲಕ ಬಿಜೆಪಿ ಸೋಲಿಸಿ ಎಂದು ಕರೆ ನೀಡಿದ್ದಾರೆ.

ದೇವೇಗೌಡರನ್ನು ನಾವು ಪ್ರಧಾನಿ‌ ಮಾಡಲಿಲ್ಲವೇ? ಅವರನ್ನು ರಾಜ್ಯಸಭೆಗೆ ಕಳಿಸಲಿಲ್ಲವೇ? ನಮ್ಮ ಅಭ್ಯರ್ಥಿ ಮೈನಾರಿಟಿಗೆ ಸೇರಿದವರು. ಜಾತ್ಯತೀತ ನಂಬಿಕೆಯಲ್ಲಿ ಅಭ್ಯರ್ಥಿ ಹಾಕಿದ್ದೇವೆ. ಜೆಡಿಎಸ್​ನವರು ಬೆಂಬಲಿಸಲಿ. ನಾವು ಮೊದಲು ಅಭ್ಯರ್ಥಿ ಹಾಕಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಒಟ್ಟು 9 ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ತಮ್ಮ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು