ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಇಲ್ಲ,ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಅಥವಾ ಹೊರಗಡೆ ಮಾರಾಟ ಮಾಡಲು ಕಾಯಿದೆಗೆ ತಿದ್ದುಪಡಿ ತಂದಿದ್ದೇವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ೀ ಕುರಿತು ಮಾಹಿತಿ ನೀಡಿದ ಅವರು, ರಾಜ್ಯ ಸರ್ಕಾರವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಇಲ್ಲ.
ರೈತರಿಗೆ ಸಹಾಯ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.
ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯಿದೆಗೆ ತಿದ್ದುಪಡಿ ಮಾಡಲು ರಾಜ್ಯಕ್ಕೆ ಅಧಿಕಾರವಿದ್ದು, ಸರ್ಕಾರವು ಡಿಸೆಂಬರ್ 31, 2020 ರಂದು ಸೆಕ್ಷನ್ 8 (2), 8 (3) ಮತ್ತು 117 ಅನ್ನು ತಿದ್ದುಪಡಿ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.