ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡುತ್ತಿದ್ದು, ರಾಜ್ಯದ ಕೆರೆಗಳ ಅಭಿವೃದ್ಧಿಗೆ 800 ಕೋಟಿ ರೂ. ಘೋಷಿಸಿದ್ದಾರೆ.
ಕೆರೆಗಳ ಅಭಿವೃದ್ಧಿಗೆ 800 ಕೋಟಿ ರೂ. ಮತ್ತು ತಾಲೂಕುಗಳ ಅಭಿವೃದ್ಧಿಗೆ ಮೂರು ಸಾವಿರ ಕೋಟಿ ರೂ. ಘೋಷಿಸಲಾಗಿದೆ. ಪ್ರವಾಹದಿಂದ ಹಾನಿಯಾದ ಕೆರೆಗಳ ಅಭಿವೃದ್ಧಿಗೆ 200 ಕೋಟಿ ರೂ. ಮೀಸಲಿಡಲಾಗಿದೆ. ಗ್ರಾಮೀಣ ಭಾಗದ ಸುಸ್ಥಿರ ಜೀವನಕ್ಕೆ ಬಜೆಟ್ ಪೂರಕವಾಗಿದೆ.
ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆಗೆ ರಾಜ್ಯ ಸರ್ಕಾರದಿಂದ ಬರೋಬ್ಬರಿ 4,713 ಕೋಟಿ ರೂ. ಅನುದಾನ ನೀಡಲಾಗಿದೆ.
ವಿಧವಾ ವೇತನ, ಲೈಂಗಿಕ ಅಲ್ಪ ಸಂಖ್ಯಾತರ ಮಾಸಿಕ ಪಿಂಚಣಿ ವೇತನವನ್ನು 800 ರೂ. ಗೆ ಏರಿಕೆ ಮಾಡಲಾಗಿದೆ. ಆಸಿಡ್ ದಾಳಿಗೊಳಗಾದ ಮಹಿಳೆಯರ ಪಿಂಚಣಿ 3 ಸಾವಿರದಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಿ ಬಜೆಟ್ ನಲ್ಲಿ ಘೋಷಿಸಲಾಗಿದೆ.