News Karnataka Kannada
Wednesday, May 15 2024
ಬೆಂಗಳೂರು ನಗರ

ಕೆಲವು ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ: ಸ್ಪೀಕರ್ ರಮೇಶ್ ಕುಮಾರ್

Photo Credit :

ಕೆಲವು ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಕೆಲವು ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದಿರುವ ಕಾರಣದಿಂದಾಗಿ ಅದನ್ನು ಪರಿಶೀಲಿಸಲು ಕಾಲಾವಕಾಶ ಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಂಡಾಯ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಸಂಜೆಯೊಳಗೆ ಬಂಡಾಯ ಶಾಸಕರ ರಾಜೀನಾಮೆ ಸ್ವೀಕರಿಸಲು ಸ್ವೀಕರ್ ಅವರಿಗೆ ಆದೇಶಿಸಿತ್ತು.

ರಾಜೀನಾಮೆ ವಿಚಾರದಲ್ಲಿ ಕಾನೂನನ್ನು ಮೀರಲಾರೆ. ಎಲ್ಲರ ವಾದ ಆಲಿಸಿರುವೆ. ಅದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಿದ್ದೇನೆ. ಎಲ್ಲವನ್ನು ನಾಳೆ ಕೋರ್ಟ್ ಗೆ ಸಲ್ಲಿಸುತ್ತೇನೆ ಎಂದು ರಮೇಶ್ ಕುಮಾರ್ ಹೇಳಿದರು.

ರಾಜೀನಾಮೆ ವಿಚಾರದಲ್ಲಿ ನಾನು ವಿಳಂಬ ಮಾಡುತ್ತಿದ್ದೇನೆ ಎನ್ನುವ ಮಾತು ಕೇಳಿ ತುಂಬಾ ನೋವಾಗಿದೆ. ರಾಜೀನಾಮೆ ಹೀಗೆ ಇರಬೇಕು ಎಂಬ ಕಾನೂನಿದೆ. ಆದರೆ ಕೆಲವು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿರಲಿಲ್ಲ. ಇದನ್ನು ಪರಿಶೀಲಿಸಲು ಸಮಯ ಹೇಳಿದ್ದೆ. ಅದನ್ನು ವಿಳಂಬ ಎನ್ನುವುದು ಸರಿಯಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು