ಕೆ.ಆರ್ .ಪುರ: ಕ್ರಿಸ್ಮಸ್ ಹಿನ್ನೆಲೆಯಲ್ಲಿ ಕೆ.ಆರ್. ಪುರದ ಟಿಸಿ ಪಾಳ್ಯದಲ್ಲಿರುವ ಸಂತ ಅಂತೋನಿ ಚರ್ಚ್ ನಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ನೇತೃತ್ವದಲ್ಲಿ ಮಾಜಿ ಪಾಲಿಕೆ ನಾಮನಿರ್ದೇಶಿತ ಸದಸ್ಯ ಅಂತೋನಿ ಸ್ವಾಮಿಯವರು 10 ಸಾವಿರ ಕೇಕ್ ಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು, ಯಾವುದೇ ಜಾತಿ- ಧರ್ಮ ನೋಡದೆ ಪ್ರತಿ ವಾರ್ಡ್ ಗೆ 10 ಸಾವಿರದಂತೆ ಕ್ಷೇತ್ರದಲ್ಲಿ ಒಟ್ಟು ಒಂದು ಲಕ್ಷಕ್ಕೂ ಅಧಿಕ ಕೇಕ್ ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.