ಬೆಂಗಳೂರು : ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್ ಈಶ್ವರಪ್ಪರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಸದನದಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದು ಹೇಳಿದ್ದಾರೆ.
ಬಿಜೆಪಿಯವರಿಗೆ ರಾಷ್ಟ್ರಧ್ವಜ ಎಂದರೇನೇ ಗೊತ್ತಿಲ್ಲ. ಅವರು ನಮ್ಮ ತಂದೆ, ತಾಯಿ ಎಂದೆಲ್ಲ ಮಾತನಾಡುತ್ತಾರಲ್ಲ ನಾವು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ನವರು ಸ್ವಾತಂತ್ರ್ಯ ತಂದುಕೊಟ್ಟಿದ್ದಕ್ಕೆ ಸಿಎಂ ಆಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿದೆ. ರಾಷ್ಟ್ರದ್ರೋಹಿ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ. ಸೋಮವಾರ ಎಲ್ಲ ತಾಲೂಕು ಕೇಂದ್ರಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶ ಕೊಡುತ್ತೇನೆ ಎಂದರು.