ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಪೋಷಕರಿಗೆ ಆತಂಕಗೊಳ್ಳದಂತೆ ಮನವಿ ಮಾಡಿದ್ದಾರೆ.
ಶಾಲೆಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿರುವುದರ ಬಗ್ಗೆ ಪೋಷಕರಿಗೆ ಆತಂಕ ಹೆಚ್ಚಾಗಿದೆ. ಮಕ್ಕಳ ಜೀವದ ಜೊತೆ ನಾವು ಆಟ ಆಡುವುದಿಲ್ಲ. ಅವರ ಕಾಳಜಿ ನಮಗೂ ಇದೆ. ಆತಂಕಗೊಳ್ಳುವುದು ಬೇಡ ಎಂದಿದ್ದಾರೆ.
ಇತ್ತೀಚೆಗಷ್ಟೇ ಕೊರೋನಾ ನಿಯಂತ್ರಣಕ್ಕೆ ಬಂದು ಶಾಲೆಗಳು ಆರಂಭವಾಗಿದ್ದವು. ಆದರೆ ಮತ್ತೆ ಸೋಂಕು ಹೆಚ್ಚಾಗಿದೆ. ಈ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಳ್ಳಬಹುದು ಎನ್ನುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಒಂದು ವೇಳೆ ತರಗತಿಗಳನ್ನು ನಿಲ್ಲಿಸಬೇಕಾದರೆ ಅದಕ್ಕೂ ನಾವು ಸಿದ್ಧ ಎಂದಿದ್ದಾರೆ.