ಬೆಂಗಳೂರು : ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಸರ್ಕಾರ ನಗರದಲ್ಲಿ ಶಾಲೆಗಳಿಗೆ ರಜೆಯನ್ನು, ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಜಾರಿಗೊಳಿಸಿದೆ.
ಇದರ ನಡುವೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ನಮ್ಮ ಮೆಟ್ರೋ ರೈಲುಗಳಲ್ಲಿ ನಿಂತು ಪ್ರಯಾಣಿಸೋದಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಸೀಟು ಭರ್ತಿಯಾದ್ರೆ ನಿಲ್ದಾಣದ ಒಳಗೂ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಕೊರೋನಾ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಮಾರ್ಗಸೂಚಿಯಂತೆ ಕೋವಿಡ್ ನಿಯಂತ್ರಣ ಕಾರ್ಯ ಮಾಡೋದು ನಮ್ಮ ನಿಮ್ಮೆಲ್ಲರ ಕೆಲಸವಾಗಿದೆ. ಕೋವಿಡ್ ನಿಯಂತ್ರಣ ಕ್ರಮವಾಗಿ ಇನ್ಮುಂದೆ ಸೀಟುಗಳ ಭರ್ತಿಗೆ ಮಾತ್ರವೇ ನಮ್ಮ ಮೆಟ್ರೋ ರೈಲಿನಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದೆ.
ಕೇವಲ ಮೆಟ್ರೋ ರೈಲಿನಲ್ಲಿ ಸೀಟುಗಳಿರುವಷ್ಟು ಪ್ರಯಾಣಿಕರು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಸೀಟು ಭರ್ತಿಯಾದ ನಂತ್ರ ನಿಂತು ಪ್ರಯಾಣಿಸಲು ಅವಕಾಶ ಇಲ್ಲ. ಅಲ್ಲದೇ ಸೀಟು ಭರ್ತಿಯಾದ ನಂತ್ರ ನಿಲ್ದಾಣದ ಒಳಗೂ ಪ್ರಯಾಣಿಕರು ಬರೋದಕ್ಕೆ ಅವಕಾಶ ಇಲ್ಲ. ವೀಕೆಂಡ್ ಸಂದರ್ಭದಲ್ಲಿ 20 ನಿಮಿಷಕ್ಕೊಂದು ಈಗ ಸಂಚರಿಸೋ ರೈಲು, 30 ನಿಮಿಷಕ್ಕೊಂದು ಸಂಚರಿಸಲಿದೆ ಎಂದು ತಿಳಿಸಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…