News Karnataka Kannada
Saturday, May 04 2024
ಬೆಂಗಳೂರು ನಗರ

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ, ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ

New Year Celebration
Photo Credit :

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ ಹೇರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಕಳೆದ ಒಂದೇ ದಿನ ಕರ್ನಾಟಕದಲ್ಲಿ 456 ಕೋವಿಡ್ ಪ್ರಕರಣಗಳು ದೃಢಪಟ್ಟು, 6 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವಾರದಲ್ಲಿ ಸೋಂಕು ತಗುಲಿರುವುದು ಆತಂಕ ಹೆಚ್ಚುವಂತೆ ಮಾಡಿದೆ.

ಇನ್ನೊಂದೆಡೆ ಕೊರೊನಾವೈರಸ್‌ನ ರೂಪಾಂತರಿ ತಳಿಯಾದ ಓಮೈಕ್ರಾನ್‌ನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು ಈ ಸೋಂಕು ತಡೆಯಲು ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಸಾದ್ಯತೆ ಇದೆ ಎನ್ನಲಾಗಿದೆ

ಒಂದೇ ವಾರದಲ್ಲಿ ಕೊಡಗು, ಹಾವೇರಿ, ಧಾರವಾಡ, ದಾವಣಗೆರೆ, ಮಂಡ್ಯ, ಮೈಸೂರಲ್ಲಿ ಕೋವಿಡ್ ಪ್ರಕರಣಗಳು ದ್ವೀಗುಣಗೊಂಡಿವೆ. ಅಲ್ಲದೆ ಶಿವಮೊಗ್ಗ ಹಾಗೂ ಕೊಪ್ಪಳದಲ್ಲಿ ಒಂದೇ ದಿನದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿವೆ.

ಕಳೆದ ನವೆಂಬರ್ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೆ ಕೋವಿಡ್ ತಡೆಯಲು ಬಿಗಿ ನಿಯಂತ್ರಣಾ ಕ್ರಮಗಳು ಜಾರಿಯಾಗುವ ಮುನ್ಸೂಚನೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು