ಬೆಂಗಳೂರು: ದಾಖಲೆ ಇಲ್ಲದೆ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 42 ಲಕ್ಷ ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರ ರಾಣಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಖಾಸಗಿ ಬಸ್ ನಲ್ಲಿದ್ದ ನಗದನ್ನು ವಶಕ್ಕೆ ಪಡೆಯಲಾಗಿದೆ.
ಈ ವೇಳೆ ಚುನಾವಣಾಧಿಕಾರಿಗಳು ಕೇರಳದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ದೇವನಹಳ್ಳಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.
ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.