ಬೆಂಗಳೂರು ನಗರ

ಖಾಸಗಿ ಶಾಲೆಗಳಿಂದ ಪೋಷಕರಿಗೆ ಡ್ರೆಸ್ ಕೋಡ್ ಜಾರಿ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಈಗ ದೊಡ್ಡ ಮಟ್ಟದಲ್ಲಿ ಅವಾಂತರ ಸೃಷ್ಟಿಸುತ್ತಿದೆ. ಈ ಗದ್ದಲ ಈಗ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಲ್ಲದೇ, ಇದು ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತದ ವಸ್ತುಗಳನ್ನು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅಲ್ಲದೆ ಹಿಜಾಬ್ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಹೈಕೋರ್ಟ್ ಸಹ ಹಿಜಾಬ್ ವಿವಾದದ ಕುರಿತು ವಿಚಾರಣೆ ನಡೆಸುತ್ತಿದೆ. ಆದರೆ, ಈ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಹೀಗಾಗಿ ಎಲ್ಲರೂ ಹೈಕೋರ್ಟ್ ತೀರ್ಪಿನ ಮೇಲೆ ಕಣ್ಣಿಟ್ಟಿದ್ದಾರೆ.

ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ತಾರ್ಕಿಕ ಅಂತ್ಯ ಪಡೆಯುವ ಮೊದಲೇ ರಾಜ್ಯದ ಕೆಲವು ಅನುದಾನಿತ ಖಾಸಗಿ ಶಾಲೆಗಳು ಪೋಷಕರಿಗೆ ವಸ್ತ್ರಸಂಹಿತೆ ಜಾರಿ ಮಾಡಿವೆ. ಇದು ಸಾಕಷ್ಟು ಚರ್ಚೆಗೆ ಕಾರಣವಗುತ್ತಿದೆ.

ಮಕ್ಕಳನ್ನು ಶಾಲೆಗೆ ಬಿಡುವಾಗ ಹಾಗೂ ಮರಳಿ ಕರೆದುಕೊಂಡು ಹೋಗುವಾಗ ಮನೆಯಲ್ಲಿಯೇ ಇರುವ ಉಡುಪುಗಳನ್ನು ಧರಿಸಿ ಬರುತ್ತಾರೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳು ಪೋಷಕರು ತಮ್ಮ ಮಕ್ಕಳನ್ನು ನೋಡಲು ಶಾಲೆಗಳಿಗೆ ಬಂದಾಗ ಅನೌಪಚಾರಿಕ ಉಡುಪುಗಳಲ್ಲಿ ಬರುವುದನ್ನ ತಪ್ಪಿಸಬೇಕು ಎನ್ನುವ ಕಾರಣಕ್ಕೆ ಡ್ರೆಸ್ ಕೋಡ್ ಜಾರಿ ಮಾಡಿದೆ.

ಸದ್ಯದ ಮಾಹಿತಿಯಂತೆ, ಪೋಷಕರು ಅಥವಾ ಪಾಲಕರು ಬರ್ಮುಡಾ, ಶಾರ್ಟ್ಸ್, ಸ್ಪೋರ್ಟ್ಸ್ ವೇರ್‌, ಹೌಸ್ ವೇರ್, ಸ್ಲೀವ್‌ಲೆಸ್ ಮತ್ತು ಟ್ರ್ಯಾಕ್ ಪ್ಯಾಂಟ್ ಇತ್ಯಾದಿಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೇ, ಈ ಕುರಿತು ಹಲವು ಶಾಲೆಗಳು ಸುತ್ತೋಲೆ ಹೊರಡಿಸಿವೆ.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

2 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

16 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

38 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

40 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

57 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago