ಬೆಂಗಳೂರು: ಖಾಸಗಿ ಶಾಲೆಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಶುಲ್ಕ ಸಂಗ್ರಹಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಮಂಡ್ಯ ಮತ್ತು ಬೆಂಗಳೂರಿನ ಕೆಲವೊಂದು ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶವನ್ನು ಧಿಕ್ಕರಿಸಿ ಶುಲ್ಕ ಪಾವತಿಸದೆ ಇರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಬರೆಯಲು ಅನುಮತಿ ನಿರಾಕರಿಸಿದೆ.
ರಾಜ್ಯ ಶಿಕ್ಷಣ ಕಾಯ್ದೆಯ ಪ್ರಕಾರ ಶಿಕ್ಷಣ ಇಲಾಖೆಯು ಸರ್ವಾಧಿಕಾರ ಹೊಂದಿದೆ. ಖಾಸಗಿ ಶಾಲೆಗಳು ಇದಕ್ಕೆ ಒಪ್ಪದೆ ಇದ್ದರೆ ಆಗ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಸಿದರು.
ಕೋವಿಡ್-19ನಿಂದಾಗಿ ಪೋಷಕರಿಗೆ ತುಂಬಾ ಸಮಸ್ಯೆಗಳಾಗಿರುವ ಕಾರಣದಿಂದಾಗಿ ಮಾನವೀಯತೆ ತೋರಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದರು.