News Karnataka Kannada
Monday, May 06 2024
ಬೆಂಗಳೂರು ನಗರ

ಖೇಲೋ ಇಂಡಿಯಾ ಕ್ರೀಡಾಕೂಟ ಸಮಾರೋಪದಲ್ಲಿ ಅಮಿತ್ ಶಾ ಭಾಗಿ!

Beng
Photo Credit :

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ನಡೆದಿದ್ದ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಇಂದು ತೆರೆ ಬಿದ್ದಿದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಮಾತನಾಡಿದರು.

2014ಕ್ಕಿಂತಲೂ ಮೊದಲು ಹಾಕಿ ಸೇರಿದಂತೆ ಎಲ್ಲ ಕ್ರೀಡಾ ಪ್ರೇಮಿಗಳು ಕ್ರಿಕೆಟ್​ ಹೊರತುಪಡಿಸಿ ಇತರ ಅಂತಾರಾಷ್ಟ್ರೀಯ ಪಂದ್ಯ ವೀಕ್ಷಣೆ ಮಾಡ್ತಿದ್ದ ವೇಳೆ ದೇಶದ ಬಗ್ಗೆ ಚಿಂತನೆ ಮಾಡ್ತಿದ್ದರು. ಒಲಿಂಪಿಕ್​, ಏಷ್ಯನ್ ಗೇಮ್ಸ್​​ ಅಥವಾ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಹೆಸರೇ ಇರ್ತಿರಲಿಲ್ಲ ಎಂದು ಹೇಳಿದರು.

ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭಾರತ ನಂಬರ್​ 1 ಆಗಬೇಕು ಎಂಬ ಗುರಿ ಇಟ್ಟುಕೊಂಡಿದ್ದರು. ಅದೇ ಕಾರಣಕ್ಕಾಗಿ ಫಿಟ್ ಇಂಡಿಯಾ, ಖೇಲೋ ಇಂಡಿಯಾದಂತಹ ಅನೇಕ ಕಾರ್ಯಕ್ರಮ ಆಯೋಜನೆ ಮಾಡಿದ್ರು. ಇದೀಗ ಅಂತಾರಾಷ್ಟ್ರೀಯ ಕ್ರೀಡೆ, ಒಲಿಂಪಿಕ್ಸ್​​ಗಳಲ್ಲಿ ಭಾರತದ ಫಲಿತಾಂಶ ಏನಾಗ್ತಿದೆ ಎಂಬುದನ್ನ ನೀವೂ ಕಾಣಬಹುದಾಗಿದೆ ಎಂದರು.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್​, ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್​​ ಯಶಸ್ವಿಯಾಗಿ ಮುಕ್ತಾಯಗೊಂಡಿವೆ. 208 ವಿಶ್ವವಿದ್ಯಾಲಯದ 3,800 ಅಥ್ಲೇಟ್ಸ್​​ಗಳು ಈ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದವು. ಈ ಮೂಲಕ ಎರಡು ರಾಷ್ಟ್ರೀಯ ದಾಖಲೆ ನಿರ್ಮಾಣವಾಗಿವೆ ಎಂದರು.

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಭಾರತದ ಪುರುಷರ ಹಾಗೂ ಮಹಿಳಾ ಹಾಕಿ ತಂಡಕ್ಕೆ ಇದೇ ವೇಳೆ ಅಮಿತ್ ಶಾ ಅಭಿನಂದಿಸಿದರು. ರಾಣಿ ರಾಂಪಾಲ್​ ನೇತೃತ್ವದ ಮಹಿಳಾ ತಂಡ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದರೆ, ಮನಪ್ರೀತ್ ಸಿಂಗ್ ನಾಯಕತ್ವದ ಪುರುಷರ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು