News Karnataka Kannada
Monday, April 29 2024
ಬೆಂಗಳೂರು ನಗರ

ಗಂಡಸ್ತನದ ಹೇಳಿಕೆ: ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಸಾಧ್ಯವಿಲ್ಲ-ಸಿಎಂ

Cm Bommai
Photo Credit :

ಬೆಂಗಳೂರು : ತಮ್ಮ ವಿರುದ್ಧ ಕುಮಾರಸ್ವಾಮಿ ನೀಡಿರುವ ಗಂಡಸ್ತನದ ಹೇಳಿಕೆ ವಿಚಾರಕ್ಕೆ ಉತ್ತರ ಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿರುವ ರೀತಿ ಇಲ್ಲಿ ಗಂಡಸ್ತನದ ಪ್ರಶ್ನೆ ಬರುವುದಿಲ್ಲ. ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

ನಾವು ಹಿಜಾಬ್ ವಿಚಾರ ಬಂದಾಗ ಹೇಗೆ ಸಮರ್ಥವಾಗಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇವೆ ಎಂದು ಜನ ನೋಡಿದ್ದಾರೆ.ಹಲಾಲ್ ಕಟ್ ವಿಚಾರದಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ. ಎಲ್ಲವನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.

ನಾಳೆ ನಡೆದಾಡುವ ದೇವರೆಂದೆ ಪ್ರಸಿದ್ಧರಾಗಿದ್ದ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ ನೆರವೇರಲಿದೆ.ಅವರ ಬದುಕಿನಿಂದ ನಮಗೆ ಸಿಕ್ಕಿರುವ ಪ್ರೇರಣೆಯೇ ಈ ಆಚರಣೆ.ಅವರ ಜನ್ಮದಿನಾಚಾರಣೆಯನ್ನ ಅರ್ಥಪೂರ್ಣವಾಗಿ ನೆರವೇರಬೇಕು.ಹೀಗಾಗಿ ಮಠದಲ್ಲಿ ತಯಾರಿಯನ್ನ ನಾನು ವೀಕ್ಷಿಸಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು